ಧಾರವಾಡ: ನವಲಗುಂದ ಅಮರಗೊಳ ಕ್ರಾಸ್ ಬಳಿ ಕಾರು ಮತ್ತು ಲಾರಿ ನಡುವೆ ಸಂಭವಸಿದ ಭೀಕರ ರಸ್ತೆ ಅಪಘಾತದಲ್ಲಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ತಿರುಚನಾಪಳ್ಳಿಯ ರವಿ ಜಂಬುಲಿಂಗಪ್ಪ ಹಂಡಿ(48), ಲೇಖಶ್ರೀ ಹಂಡಿ(19), ನವೀನ್ ಖನ್ನಾ(16), ಹಾಗೂ ಬಾಗಲಕೋಟೆಯ ಶರಣ ಜಿಗಜಿನ್ನಿ (10), ವರ್ಷಾ ಜಿಗಜಿನ್ನಿ (12) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ದಾವಣಗೆರೆಯಿಂದ ಬಾಗಲಕೋಟೆ ಕಡೆ ಹೋಗುತ್ತಿದ್ದ ಫೋರ್ಡ್ ಕಾರಿನ ಮುಂಭಾಗದ ಟೈರ್ ಸ್ಪೋಟಗೊಂಡ ಪರಿಣಾಮ ಕಾರು ನಿಯಂತ್ರಣ ತಪ್ಪಿ ಎದುರಿನಿಂದ ಬರುತ್ತಿದ್ದ ಲಾರಿಗೆ ರಭಸದಲ್ಲಿ ಡಿಕ್ಕಿ ಹೊಡೆದಿದೆ. ಅಪಘಾತದ ಭೀಕರತೆಗೆ ಕಾರಿನಲ್ಲಿದ್ದ ಎಲ್ಲರೂ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ನವಲಗುಂದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.