ಹಾಸನ–ಸಕಲೇಶಪುರ ಮಾರ್ಗವಾಗಿ ಮಂಗಳೂರು, ಧರ್ಮಸ್ಥಳ, ಸುಬ್ರಹ್ಮಣ್ಯಕ್ಕೆ ನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆ ತುಂಬ ಗುಂಡಿಗಳು ಬಿದ್ದಿದ್ದು, ಡಾಂಬರು ಕಿತ್ತು ಬಂದಿದೆ. ಇಂಥ ಮಾರ್ಗದಲ್ಲಿ ಸಂಚರಿಸಬೇಕಿದೆ. ಹದಗೆಟ್ಟ ರಸ್ತೆಯಿಂದಾಗಿ ವಾರದ ಹಿಂದೆಯಷ್ಟೇ ನಾಲ್ಕು ವಾಹನಗಳು ಕೆಟ್ಟು ನಿಂತಿದ್ದರಿಂದ, ಎಂಟು ತಾಸು ಹೆದ್ದಾರಿ ಬಂದ್ ಆಗಿತ್ತು.