ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೆದ್ದಾರಿ ಅಭಿವೃದ್ಧಿಗೆ ₹1 ಲಕ್ಷ ಕೋಟಿ ಪ್ರಸ್ತಾವನೆ: ಸಚಿವ ಕಾರಜೋಳ

Last Updated 31 ಡಿಸೆಂಬರ್ 2019, 20:41 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ಹೆದ್ದಾರಿಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ ₹1 ಲಕ್ಷ ಕೋಟಿ ಮೊತ್ತದ ಯೋಜನೆಯನ್ನು ಸಲ್ಲಿಸಿರುವುದಾಗಿ ಲೋಕೋಪಯೋಗಿ ಸಚಿವ ಗೋವಿಂದ ಕಾರಜೋಳ ತಿಳಿಸಿದರು.

ಯೋಜನೆಗಳಿಗೆ ಅಗತ್ಯ ಜಮೀನನ್ನು ಸ್ವಾಧೀನ ಬೇಗನೆ ಮಾಡಿಕೊಟ್ಟರೆ, ರಾಜ್ಯಕ್ಕೆ ಹೆಚ್ಚಿನ ಯೋಜನೆಗಳನ್ನು ನೀಡಲಾಗುವುದು ಎಂದು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ಆಗಸ್ಟ್‌ ತಿಂಗಳ ಪ್ರವಾಹದ ಸಂದರ್ಭದಲ್ಲಿ ಕೊಚ್ಚಿ ಹೋದ ರಸ್ತೆ ಮತ್ತು ಸೇತುವೆಗಳನ್ನು ರಿಪೇರಿ ಮಾಡಲು ಕ್ರಮ ಕೈಗೊಳ್ಳಲಾಗಿದೆ. ವಾಹನಗಳ ಓಡಾಟಕ್ಕೆ ವ್ಯವಸ್ಥೆ ಮಾಡಲಾಗಿದೆ. ಈ ಸಂದರ್ಭದಲ್ಲಿ ₹7 ಸಾವಿರ ಕೋಟಿಯಷ್ಟು ರಸ್ತೆ ಹಾಳಾಗಿದೆ. ಈ ರಸ್ತೆಗಳ ಶಾಶ್ವತ ಅಭಿವೃದ್ಧಿಗೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT