ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಅವರು, ‘ಆನಂದ್ ಸಿಂಗ್ ಪಕ್ಷ ಸೇರಿದ್ದಾರೆ. ಹಗರಿಬೊಮ್ಮನಹಳ್ಳಿ ಶಾಸಕ ಭೀಮಾ ನಾಯ್ಕ ಕೂಡ ಕಾಂಗ್ರೆಸ್ ಸೇರುವುದು ಖಚಿತವಾಗಿದೆ. ಆದರೆ, ಇವರಿಬ್ಬರಿಗೂ ಟಿಕೆಟ್ ಖಚಿತವಾಗಿಲ್ಲ. ಟಿಕೆಟ್ ಸಿಗುವ ಭರವಸೆ ಸಿಕ್ಕಿದೆ ಎಂದು ಅವರು ಹೇಳಿಕೊಂಡರೆ ಅದು ಅವರ ವೈಯಕ್ತಿಕ ಅಭಿಪ್ರಾಯ. ಕೂಡ್ಲಿಗಿ ಶಾಸಕ ಬಿ. ನಾಗೇಂದ್ರ ಕೂಡ ಪಕ್ಷ ಸೇರುವ ಸಾಧ್ಯತೆ ಇದೆ’ ಎಂದರು.