ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೇಷ್ಮೆ ಇಲಾಖೆಗೆ ರೋಹಿಣಿ ವರ್ಗ

Last Updated 26 ಸೆಪ್ಟೆಂಬರ್ 2019, 20:00 IST
ಅಕ್ಷರ ಗಾತ್ರ

ಬೆಂಗಳೂರು: ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿಯ ಹಣವನ್ನು ನೆರೆ ಪರಿಹಾರ ಹಾಗೂ ಅನ್ಯ ಉದ್ದೇಶಕ್ಕೆ ಬಳಸಲು ಅವಕಾಶ ನೀಡದ ಕಾರಣಕ್ಕೆ ವರ್ಗಾವಣೆ ಶಿಕ್ಷೆಗೆ ಗುರಿಯಾಗಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಸರ್ಕಾರ ಕೊನೆಗೂ ಸ್ಥಳ ತೋರಿಸಿದೆ.

ಕಟ್ಟಡ ಹಾಗೂ ನಿರ್ಮಾಣ ಕೆಲಸಗಾರರ ಕಲ್ಯಾಣ ಮಂಡಳಿಯ ಕಾರ್ಯದರ್ಶಿ ಹುದ್ದೆಯಿಂದ ವರ್ಗಾವಣೆ ಮಾಡಿ, ಸ್ಥಳ ತೋರಿಸಿರಲಿಲ್ಲ. ಈಗ ರೇಷ್ಮೆ ಅಭಿವೃದ್ಧಿ ಆಯುಕ್ತರನ್ನಾಗಿ ವರ್ಗಾಯಿಸಿದ್ದು, ಗುರುವಾರ ಅಧಿಕಾರ ವಹಿಸಿಕೊಂಡಿದ್ದಾರೆ.

ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿಯಲ್ಲಿದ್ದ ₹8 ಸಾವಿರ ಕೋಟಿಯಲ್ಲಿ ₹3 ಸಾವಿರ ಕೋಟಿಯನ್ನು ನೆರೆ ಸಂತ್ರಸ್ತರ ಪರಿಹಾರ ನಿಧಿಗೆ ನೀಡಬೇಕು.ಕಾರ್ಮಿಕರು ಹಾಗೂ ಅವರ ಮಕ್ಕಳ ಕಲ್ಯಾಣಕ್ಕಾಗಿ ತಂತ್ರಜ್ಞಾನ ಆಧಾರಿತ ಸೇವೆಯನ್ನು ಟೆಂಡರ್ ಕರೆಯದೇ ಕಿಯೋನಿಕ್ಸ್‌ಗೇ ಕೊಡಬೇಕು ಎಂದು ಕಾರ್ಮಿಕ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಒತ್ತಡ ಹಾಕುತ್ತಿದ್ದರು. ಇದಕ್ಕೆ ಒಪ್ಪದ ಹಿನ್ನೆಲೆಯಲ್ಲಿ ಸ್ಥಳ ತೋರಿಸದೆ ವರ್ಗಾವಣೆ ಮಾಡಲಾಗಿತ್ತು.

ಕಾರ್ಮಿಕರ ನಿಧಿ ರಕ್ಷಿಸಲು ಮುಂದಾದ ಅಧಿಕಾರಿಯನ್ನು ವರ್ಗಾಯಿಸುವ ಮೂಲಕ ಶಿಕ್ಷೆ ನೀಡಲಾಗಿದೆ ಎಂದು ಅಧಿಕಾರಿ ವರ್ಗ ಹಾಗೂ ಸಾರ್ವಜನಿಕ ವಲಯದಲ್ಲಿ ಆಕ್ರೋಶ ವ್ಯಕ್ತವಾಗಿತ್ತು. ಸಾಮಾಜಿಕ ಜಾಲ ತಾಣದಲ್ಲೂ ಆಕ್ಷೇಪಗಳು ಕೇಳಿ ಬಂದಿದ್ದವು. ಮತ್ತೆ ಕಾರ್ಮಿಕ ಇಲಾಖೆಗೆ ವರ್ಗಾವಣೆ ಮಾಡಬೇಕು ಎಂಬ ಒತ್ತಡ ಹೆಚ್ಚುತ್ತಿರುವುದನ್ನು ಮನಗಂಡ ಸರ್ಕಾರ, ರೇಷ್ಮೆ ಇಲಾಖೆಗೆ ವರ್ಗಾಯಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT