ಹಲಸೂರು ಗೇಟ್ ಠಾಣೆಯ ರೌಡಿಶೀಟರ್ ಪಟ್ಟಿಯಲ್ಲಿ ಹೆಸರಿದ್ದ ಸುಬ್ರಮಣಿ, ಎರಡು ವರ್ಷದಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು. ಆರೋಗ್ಯದಲ್ಲಿ ಚೇತರಿಕೆ ಕಂಡುಬರದೇ ಗುರುವಾರ ನಿಧನ ಹೊಂದಿದರು. ಅವರಿಗೆ ಅಂತಿಮ ನಮನ ಸಲ್ಲಿಸುವುದಕ್ಕಾಗಿ ಬೆಂಬಲಿಗರು, ಸುಬ್ರಮಣಿ ಅವರ ಭಾವಚಿತ್ರವಿದ್ದ ಬ್ಯಾನರ್ಗಳನ್ನು ಎಸ್.ಪಿ ರಸ್ತೆಯ ಹಲವೆಡೆ ಕಟ್ಟಿದ್ದರು. ಎಸ್.ಪಿ ರಸ್ತೆಯ ಮಾಲೀಕರನ್ನು ಭೇಟಿಯಾಗಿ ಅಂಗಡಿಗಳನ್ನು ಮುಚ್ಚುವಂತೆ ಮನವಿ ಮಾಡಿ ಬಂದ್ ಆಚರಿಸಿದರು.