ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ ಕೊಲೆ

Last Updated 26 ಏಪ್ರಿಲ್ 2019, 10:10 IST
ಅಕ್ಷರ ಗಾತ್ರ

ಕಲಬುರ್ಗಿ: ತಾಲ್ಲೂಕಿನ ಬಬಲಾದ್‌ ಗ್ರಾಮದಲ್ಲಿ ಶುಕ್ರವಾರ ರಾತ್ರಿ ರೌಡಿಶೀಟರ್‌ ಒಬ್ವನನ್ನು ಯುವಕರ ಗುಂಪು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದೆ.

ಕಲಬುರ್ಗಿ ನಗರದ ಕಾಂತಾ ಕಾಲೊನಿ ನಿವಾಸಿ ಆನಂದ್‌ ರಾಮಪೂರೆ (30) ಕೊಲೆಯಾದ ವ್ಯಕ್ತಿ. ಕೊಲೆ, ಸುಲಿಗೆ ಸೇರಿದಂತೆ ಮತ್ತಿತರ ಅಪರಾಧ ಪ್ರಕರಣಗಳ ಕುರಿತು ಈತನ ಮೇಲೆ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿವೆ.

ಆನಂದ್‌ ಶುಕ್ರವಾರ ಬಬಲಾದ್‌ಗೆ ಬರುವುದನ್ನು ಪತ್ತೆ ಮಾಡಿದ ದುಷ್ಕರ್ಮಿಗಳು ಹೊಂಚು ಹಾಕಿ ಕೊಲೆ ಮಾಡಿದ್ದಾರೆ. ಇದು ಹಳೆ ದ್ವೇಷದಿಂದ ನಡೆದ ಕೊಲೆ ಎಂಬುದು ಮೇಲ್ನೋಟಕ್ಕೆ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT