<p><strong>ಚಿತ್ರದುರ್ಗ</strong>: ಮುಖ್ಯಮಂತ್ರಿ ಆಗಿದ್ದವರು ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು (ಆರ್ಎಸ್ಎಸ್) ನಿಷೇಧ ಮಾಡುವಂತೆ ಮಾತನಾಡುವ ಬದಲು ಅಧಿಕಾರದಲ್ಲಿದ್ದಾಗ ನಿಷೇಧ ಹೇರಿ ತಾಕತ್ತು ತೋರಿಸಬೇಕಿತ್ತು ಎಂದು ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಎಚ್.ಡಿ.ಕುಮಾರಸ್ವಾಮಿಗೆ ಸವಾಲು ಹಾಕಿದರು.</p>.<p>ಚಿತ್ರದುರ್ಗದ ಮಾದಾರ ಚೆನ್ನಯ್ಯ ಗುರುಪೀಠಕ್ಕೆ ಮಂಗಳವಾರ ಭೇಟಿ ನೀಡಿದ ಅವರು ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದರು.</p>.<p>ಆರ್ಎಸ್ಎಸ್ ಹಾಗೂ ಬಜರಂಗದಳ ಶಿಸ್ತು, ದೇಶಭಕ್ತಿ ಬೆಳೆಸುವ ಸಂಘಟನೆ. ಗೋಮಾತೆ ಮತ್ತು ಮಹಿಳೆಯರನ್ನು ರಕ್ಷಣೆ ಮಾಡುವ ಕೆಲಸ ಮಾಡುತ್ತಿದ್ದೇವೆ. ಯಾರನ್ನೋ ಹೊಡೆಯುವ, ಬಡಿಯುವ ಸಂಸ್ಕೃತಿ ನಮ್ಮದಲ್ಲ. ಆದರೂ, ಆರ್ಎಸ್ಎಸ್ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.</p>.<p>ಹಿಂದೂ ಸಮಾಜದ ರಕ್ಷಣೆ ಆರ್ಎಸ್ಎಸ್ ಕರ್ತವ್ಯ. ಹಿಂದೂ ಸಮಾಜವೇ ನಮ್ಮ ಹಿಂದೆ ಬರುತ್ತಿದೆ. ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಮಹಾತ್ಮ ಗಾಂಧೀಜಿ ಕೊಲೆ ಪ್ರಕರಣ ಮುಂದಿಟ್ಟುಕೊಂಡು ಸಂಘಟನೆ ನಿಷೇಧ ಮಾಡಲಾಗಿತ್ತು. ಆದರೆ, ಅಷ್ಟೇ ಶೀಘ್ರವಾಗಿ ನಿಷೇಧ ತೆಗೆದು ಹಾಕಲಾಯಿತು ಎಂದರು.</p>.<p>ಕ್ರೈಸ್ತರು, ಮುಸ್ಲಿಮರು ಪಾಶ್ಚಾತ್ಯ ದೃಷ್ಠಿಕೋನ ಹೊಂದಿದ್ದಾರೆ. ಹಿಂದೂ ಸಮಾಜದ ಹೆಣ್ಣು ಮಕ್ಕಳನ್ನು ಹಾರಿಸಿಕೊಂಡು ಹೋಗುತ್ತಿದ್ದಾರೆ. ಗೋವುಗಳ ಮಾರಣಹೋಮ ಮಾಡಲಾಗುತ್ತಿದೆ. ಇದನ್ನು ತಡೆಯುವುದು ಹಾಗೂ ಹಿಂದೂ ಸಮಾಜ ರಕ್ಷಣೆ ನಮ್ಮ ಆದ್ಯತೆ ಎಂದು ಹೇಳಿದರು.</p>.<p>ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾಗೆ ಹೊರ ದೇಶದಿಂದ ಹಣ ಬರುತ್ತಿದೆ. ಸಿಮಿ ಸಂಘಟನೆಯಿಂದ ಇದು ಹಣ ಪಡೆಯುತ್ತಿದೆ. ಈ ಹಣ ಬಳಸಿಕೊಂಡು ದೇಶದಲ್ಲಿ ದೊಂಬಿ ಸೃಷ್ಟಿಸಲಾಗುತ್ತಿದೆ. ಇದನ್ನು ಮಟ್ಟ ಹಾಕಲು ಪ್ರಧಾನಿ ಮೋದಿ ದಿಟ್ಟ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದರು.</p>.<p><strong>ಇದನ್ನೂ ಓದಿ...<a href="https://www.prajavani.net/district/tumakuru/huge-rally-for-caa-in-tumkur-696242.html" target="_blank">ಮುಸಲ್ಮಾನರು ಅತಿಥಿಗಳಾಗೇ ಇರಲಿ: ಕಲ್ಲಡ್ಕ ಪ್ರಭಾಕರ್ ಭಟ್</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿತ್ರದುರ್ಗ</strong>: ಮುಖ್ಯಮಂತ್ರಿ ಆಗಿದ್ದವರು ರಾಷ್ಟ್ರೀಯ ಸ್ವಯಂ ಸೇವಕ ಸಂಘವನ್ನು (ಆರ್ಎಸ್ಎಸ್) ನಿಷೇಧ ಮಾಡುವಂತೆ ಮಾತನಾಡುವ ಬದಲು ಅಧಿಕಾರದಲ್ಲಿದ್ದಾಗ ನಿಷೇಧ ಹೇರಿ ತಾಕತ್ತು ತೋರಿಸಬೇಕಿತ್ತು ಎಂದು ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಎಚ್.ಡಿ.ಕುಮಾರಸ್ವಾಮಿಗೆ ಸವಾಲು ಹಾಕಿದರು.</p>.<p>ಚಿತ್ರದುರ್ಗದ ಮಾದಾರ ಚೆನ್ನಯ್ಯ ಗುರುಪೀಠಕ್ಕೆ ಮಂಗಳವಾರ ಭೇಟಿ ನೀಡಿದ ಅವರು ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದರು.</p>.<p>ಆರ್ಎಸ್ಎಸ್ ಹಾಗೂ ಬಜರಂಗದಳ ಶಿಸ್ತು, ದೇಶಭಕ್ತಿ ಬೆಳೆಸುವ ಸಂಘಟನೆ. ಗೋಮಾತೆ ಮತ್ತು ಮಹಿಳೆಯರನ್ನು ರಕ್ಷಣೆ ಮಾಡುವ ಕೆಲಸ ಮಾಡುತ್ತಿದ್ದೇವೆ. ಯಾರನ್ನೋ ಹೊಡೆಯುವ, ಬಡಿಯುವ ಸಂಸ್ಕೃತಿ ನಮ್ಮದಲ್ಲ. ಆದರೂ, ಆರ್ಎಸ್ಎಸ್ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ ಎಂದು ಕಿಡಿಕಾರಿದರು.</p>.<p>ಹಿಂದೂ ಸಮಾಜದ ರಕ್ಷಣೆ ಆರ್ಎಸ್ಎಸ್ ಕರ್ತವ್ಯ. ಹಿಂದೂ ಸಮಾಜವೇ ನಮ್ಮ ಹಿಂದೆ ಬರುತ್ತಿದೆ. ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಮಹಾತ್ಮ ಗಾಂಧೀಜಿ ಕೊಲೆ ಪ್ರಕರಣ ಮುಂದಿಟ್ಟುಕೊಂಡು ಸಂಘಟನೆ ನಿಷೇಧ ಮಾಡಲಾಗಿತ್ತು. ಆದರೆ, ಅಷ್ಟೇ ಶೀಘ್ರವಾಗಿ ನಿಷೇಧ ತೆಗೆದು ಹಾಕಲಾಯಿತು ಎಂದರು.</p>.<p>ಕ್ರೈಸ್ತರು, ಮುಸ್ಲಿಮರು ಪಾಶ್ಚಾತ್ಯ ದೃಷ್ಠಿಕೋನ ಹೊಂದಿದ್ದಾರೆ. ಹಿಂದೂ ಸಮಾಜದ ಹೆಣ್ಣು ಮಕ್ಕಳನ್ನು ಹಾರಿಸಿಕೊಂಡು ಹೋಗುತ್ತಿದ್ದಾರೆ. ಗೋವುಗಳ ಮಾರಣಹೋಮ ಮಾಡಲಾಗುತ್ತಿದೆ. ಇದನ್ನು ತಡೆಯುವುದು ಹಾಗೂ ಹಿಂದೂ ಸಮಾಜ ರಕ್ಷಣೆ ನಮ್ಮ ಆದ್ಯತೆ ಎಂದು ಹೇಳಿದರು.</p>.<p>ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾಗೆ ಹೊರ ದೇಶದಿಂದ ಹಣ ಬರುತ್ತಿದೆ. ಸಿಮಿ ಸಂಘಟನೆಯಿಂದ ಇದು ಹಣ ಪಡೆಯುತ್ತಿದೆ. ಈ ಹಣ ಬಳಸಿಕೊಂಡು ದೇಶದಲ್ಲಿ ದೊಂಬಿ ಸೃಷ್ಟಿಸಲಾಗುತ್ತಿದೆ. ಇದನ್ನು ಮಟ್ಟ ಹಾಕಲು ಪ್ರಧಾನಿ ಮೋದಿ ದಿಟ್ಟ ಕ್ರಮ ಕೈಗೊಳ್ಳುತ್ತಿದ್ದಾರೆ ಎಂದರು.</p>.<p><strong>ಇದನ್ನೂ ಓದಿ...<a href="https://www.prajavani.net/district/tumakuru/huge-rally-for-caa-in-tumkur-696242.html" target="_blank">ಮುಸಲ್ಮಾನರು ಅತಿಥಿಗಳಾಗೇ ಇರಲಿ: ಕಲ್ಲಡ್ಕ ಪ್ರಭಾಕರ್ ಭಟ್</a></strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>