‘ಯಡಿಯೂರಪ್ಪನವರು ಒತ್ತಡಕ್ಕೆ ಮಣಿದು, ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು, ಸಚಿವ ಸಂಪುಟ ಸಭೆಯಲ್ಲಿ ಚರ್ಚೆಗೆ ತರುವಂತೆ ತರಾತರಿಯಲ್ಲಿ ಆದೇಶ ಹೊರಡಿಸಿದ್ದಾರೆ. ಅದಕ್ಕೂ ಮುನ್ನ ಜಿಲ್ಲೆಯ ನಾಲ್ಕು ಜನ ಬಿಜೆಪಿ ಶಾಸಕರ ಅಭಿಪ್ರಾಯ ಪಡೆಯಬಹುದಿತ್ತು. ಆದರೆ, ಈ ಘಟನೆಯಿಂದ ನಿಜಕ್ಕೂ ನಾವು ಬಿಜೆಪಿಯ ಶಾಸಕರೇ ಎಂಬ ಪ್ರಶ್ನೆ ನಮ್ಮನ್ನು ನಾವು ಕೇಳಿಕೊಳ್ಳುವಂತಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.