ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನ್ನಭಾಗ್ಯ ಯೋಜನೆ ತಂದಿದ್ದು ಮೋದಿ; ದೇಶಪಾಂಡೆ ತಬ್ಬಿಬ್ಬು!

Last Updated 18 ಮೇ 2019, 7:40 IST
ಅಕ್ಷರ ಗಾತ್ರ

ಬೆಳಗಾವಿ: ತಾಲ್ಲೂಕಿನ ಹೊನಗಾದಲ್ಲಿ ನಡೆಯುತ್ತಿರುವ ನರೇಗಾ ಕಾಮಗಾರಿಯನ್ನು ಕಂದಾಯ ಸಚಿವ ಆರ್.ವಿ. ದೇಶಪಾಂಡೆ ಶನಿವಾರ ವೀಕ್ಷಿಸಿದರು.

ಈ ಸಂದರ್ಭದಲ್ಲಿ ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಅನ್ನಭಾಗ್ಯ ಯೋಜನೆಯನ್ನು ಜಾರಿಗೆ ತಂದಿದ್ದು ಯಾರು?' ಎಂದು ಕೇಳಿದರು.

ಗುಂಪಿನಲ್ಲಿ ಹಿಂಬದಿ ನಿಂತಿದ್ದ ಮಹಿಳೆಯರು ‘ಮೋದಿ ಮೋದಿ...’ಎಂದು ಕೂಗಿದರು. ಇದರಿಂದಾಗಿ, ಸಚಿವರು ಕೆಲಕ್ಷಣ ತಬ್ಬಿಬ್ಬಾದರು. ನಗುತ್ತಲೇ ಸುಮ್ಮನಾದರು.ನಂತರ ಕೆಲವರು ಸಿದ್ದರಾಮಯ್ಯ ಎಂದು ಕೂಗಿದರು. ಇದರಿಂದ ಸ್ವಲ್ಪ ಮಟ್ಟಿಗೆ ನಿಟ್ಟುಸಿರು ಬಿಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT