ಮುಂಬೈನಲ್ಲಿ ಅತೃಪ್ತರ ಬಣದೊಂದಿಗೆ ಇರುವ ಶಿವರಾಮ ಹೆಬ್ಬಾರ,‘ಈ ಮೈತ್ರಿ ಸರ್ಕಾರದಲ್ಲಿ ತೀವ್ರ ಪ್ರಯತ್ನದ ಹೊರತಾಗಿಯೂ ನನ್ನ ಕ್ಷೇತ್ರಕ್ಕೆ ಯಾವ ಯೋಜನೆಗಳನ್ನೂ ತರುವಲ್ಲಿ ಯಶಸ್ಸು ಕಾಣಲಿಲ್ಲ. ಮುಂದೆ ನಿಂತು ಸಮಸ್ಯೆ ಬಗೆಹರಿಸಬೇಕಾಗಿದ್ದ ಜಿಲ್ಲಾ ಮಂತ್ರಿಗಳಂತೂ ಜಿಲ್ಲೆಯಿಂದ ಆರಿಸಿಬಂದ ಪಕ್ಷದ ಇನ್ನೊಬ್ಬ ಶಾಸಕನಾದ ನನ್ನ ಕ್ಷೇತ್ರದ ಸಮಸ್ಯೆಗಳನ್ನು ಕೇಳಿಸಿಕೊಳ್ಳುವ ಕನಿಷ್ಠ ಕಾಳಜಿಯನ್ನು ತೋರಲಿಲ್ಲ’ ಎಂದು ಫೇಸ್ಬುಕ್ನಲ್ಲಿ ಆರೋಪಿಸಿದ್ದರು.