ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಶ್ವನಾಥ್ ವಿರುದ್ಧ ಸಾ.ರಾ ಮಹೇಶ್ ವಾಗ್ದಾಳಿ

Last Updated 5 ಆಗಸ್ಟ್ 2019, 8:42 IST
ಅಕ್ಷರ ಗಾತ್ರ

ಮೈಸೂರು: ವಿಶ್ವನಾಥ್ ಅವರು ಪಕ್ಷ ದ್ರೋಹ ಮಾಡಿ ಮುಂಬೈಗೆ ಹೋಗಿ ಕುಳಿತಿದ್ದು ಸುಳ್ಳಾ? ಯಾವುದೇ ಹಣ ಪಡೆಯದೆ ಹೋಗಿದ್ದಾರೆಯೇ? ಈ ವಿಚಾರದಲ್ಲಿ ಚರ್ಚೆಗೆ ನಾನು ಸಿದ್ಧ ಎಂದು ಶಾಸಕ ಸಾ.ರಾ.ಮಹೇಶ್ ಸವಾಲು ಹಾಕಿದರು.

ದೇವೇಗೌಡರ ಕುಟುಂಬಕ್ಕೆ ವಿಷ ಉಣಿಸಿದವರು ಅನೇಕರಿದ್ದಾರೆ. ಆದರೆ, ನೀವು ಕಾರ್ಕೋಟಕ ವಿಷ. ಜನರಿಗೆ ನಿಮ್ಮ ಗೋಮುಖ ವ್ಯಾಘ್ರ ಮುಖದ ದರ್ಶನವಾಗಬೇಕಿದೆ ಎಂದು ವಾಗ್ದಾಳಿ ನಡೆಸಿದರು.

ಮೂಲೇ ಗುಂಪಾಗಿದ್ದ ಅವರನ್ನು ಪಕ್ಷಕ್ಕೆ ಕರೆತಂದೆ. ಇದರಿಂದ ಹಿರಿಯ ರಾಜಕಾರಣಿಗೆ ಉತ್ತಮ ನೆಲೆ ಕಲ್ಪಿಸುವ ಉದ್ದೇಶ ಇತ್ತು. ಆದರೆ, ವಿಶ್ವನಾಥ್ ಈ ರೀತಿಯ ಕಾರ್ಕೋಟಕ ವಿಷ ಎಂದು ಗೊತ್ತಿರಲಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ದೇವೇಗೌಡರ ಮನೆಯಲ್ಲಿ ಕುಳಿತು ನೀವು ಏನು ಹೇಳಿದ್ರಿ? ಸಿದ್ದರಾಮಯ್ಯರಿಂದ ಸಾಕಷ್ಟು ನೊಂದಿದ್ದೇನೆ. ನನಗೆ ಯಾವುದೇ ಅಧಿಕಾರ ಬೇಡ, ಸಚಿವ ಸ್ಥಾನ ಬೇಡ. ನನ್ನ ಕೊನೆಗಾಲದಲ್ಲಿ ಕೇವಲ ಶಾಸಕನನ್ನಾಗಿ ಮಾಡಿ ಸಾಕು ಎಂದಿದ್ರಿ. ಅದೆಲ್ಲವೂ ಈಗ ಮರೆತು ಹೋಯಿತೇ ಎಂದು ಪ್ರಶ್ನಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT