ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಿಗದಿಯಂತೆ ಎಸ್ಸೆಸ್ಸೆಲ್ಸಿ ಪರೀಕ್ಷೆ: ಸಚಿವ ಸುರೇಶ್ ಕುಮಾರ್‌

ಕಂಟೈನ್‌ಮೆಂಟ್‌ ವ್ಯಾಪ್ತಿಯ ವಿದ್ಯಾರ್ಥಿಗಳಿಗೆ ಮತ್ತೆ ಪರೀಕ್ಷೆ ಬರೆಯಲು ಅವಕಾಶ
Last Updated 9 ಜೂನ್ 2020, 18:32 IST
ಅಕ್ಷರ ಗಾತ್ರ

ಉಡುಪಿ: ನಿಗದಿತ ವೇಳಾಪಟ್ಟಿಯಂತೆ ಜೂನ್‌ 25ರಿಂದ ರಾಜ್ಯದಲ್ಲಿಎಸ್ಸೆಸ್ಸೆಲ್ಸಿ ಪರೀಕ್ಷೆಗಳು ನಡೆಯಲಿವೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್‌. ಸುರೇಶ್ ಕುಮಾರ್ ತಿಳಿಸಿದರು.

ತಮಿಳುನಾಡು ಸರ್ಕಾರ ಎಸ್ಸೆಸ್ಸೆಲ್ಸಿ ಪರೀಕ್ಷೆ ರದ್ದು ಮಾಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ‘ಕೇಂದ್ರದ ಗೃಹ ಇಲಾಖೆ, ಮಾನವ ಸಂಪನ್ಮೂಲ ಸಚಿವಾಲಯ ಹಾಗೂ ಹೈಕೋರ್ಟ್‌ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲು ಹಸಿರು ನಿಶಾನೆ ತೋರಿಸಿವೆ. ಅದರಂತೆ, ರಾಜ್ಯ ಸರ್ಕಾರ ಪರೀಕ್ಷೆಗೆ ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡಿದೆ. ಈ ವಿಚಾರದಲ್ಲಿ ತಮಿಳುನಾಡು ಸರ್ಕಾರ ಕರ್ನಾಟಕದ ಕ್ರಮಗಳನ್ನು ಅನುಸರಿಸಬೇಕಿತ್ತು’ ಎಂದು ಅಭಿಪ್ರಾಯಪಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT