<p><strong>ಮೈಸೂರು:</strong> ‘ಜೆಡಿಎಸ್, ಕಾಂಗ್ರೆಸ್ನ ಕೆಲ ಶಾಸಕರಿಗೆ ಮಂತ್ರಿ ಸ್ಥಾನ ನೀಡುವ ಆಮಿಷವನ್ನು ಬಿಜೆಪಿ ಮುಖಂಡರು ಮತ್ತೆ ಒಡ್ಡಿದ್ದಾರೆ. ದೂರವಾಣಿ ಕರೆ ಬಂದಿರುವ ವಿಚಾರವನ್ನು ಶಾಸಕರು ಮುಖ್ಯಮಂತ್ರಿ ಗಮನಕ್ಕೆ ಭಾನುವಾರ ತಂದಿದ್ದಾರೆ’ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಇಲ್ಲಿ ಸೋಮವಾರ ತಿಳಿಸಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿ, ‘ನಮ್ಮ ಶಾಸಕರನ್ನು ಸೆಳೆಯಲು ಒಂದಲ್ಲಾ ಒಂದು ಆಸೆ ತೋರಿಸುತ್ತಿದ್ದಾರೆ. ಕೇಂದ್ರದಲ್ಲಿ ಅವರ ಅವಧಿ ಎರಡು ತಿಂಗಳು ಮಾತ್ರ. ಯಾವ ರೀತಿ ಮಂತ್ರಿ ಸ್ಥಾನ ನೀಡುತ್ತಾರೋ ಗೊತ್ತಿಲ್ಲ’ ಎಂದರು.</p>.<p>‘ವಿರೋಧ ಪಕ್ಷದ ಜವಾಬ್ದಾರಿ ಮರೆತು ಕುರ್ಚಿಗಾಗಿ ಬಿಜೆಪಿಯವರು ಏನೆಲ್ಲಾ ಕಸರತ್ತು ನಡೆಸುತ್ತಿದ್ದಾರೆ ಎಂಬುದನ್ನು ರಾಜ್ಯದ ಜನ ನೋಡುತ್ತಿದ್ದಾರೆ. ಅಸಹ್ಯಕರ, ಕೀಳುಮಟ್ಟದ ರಾಜಕಾರಣಕ್ಕೆ ಇಳಿದಿದ್ದಾರೆ’ ಎಂದು ಟೀಕಿಸಿದರು.</p>.<p>‘ಹಿಂದೆ ಹೇಳಿದಂತೆ ಬಿಜೆಪಿಯ ಕೆಲ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ಎಲ್ಲವೂ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ಕಾದು ನೋಡಿ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ‘ಜೆಡಿಎಸ್, ಕಾಂಗ್ರೆಸ್ನ ಕೆಲ ಶಾಸಕರಿಗೆ ಮಂತ್ರಿ ಸ್ಥಾನ ನೀಡುವ ಆಮಿಷವನ್ನು ಬಿಜೆಪಿ ಮುಖಂಡರು ಮತ್ತೆ ಒಡ್ಡಿದ್ದಾರೆ. ದೂರವಾಣಿ ಕರೆ ಬಂದಿರುವ ವಿಚಾರವನ್ನು ಶಾಸಕರು ಮುಖ್ಯಮಂತ್ರಿ ಗಮನಕ್ಕೆ ಭಾನುವಾರ ತಂದಿದ್ದಾರೆ’ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಇಲ್ಲಿ ಸೋಮವಾರ ತಿಳಿಸಿದರು.</p>.<p>ಸುದ್ದಿಗಾರರೊಂದಿಗೆ ಮಾತನಾಡಿ, ‘ನಮ್ಮ ಶಾಸಕರನ್ನು ಸೆಳೆಯಲು ಒಂದಲ್ಲಾ ಒಂದು ಆಸೆ ತೋರಿಸುತ್ತಿದ್ದಾರೆ. ಕೇಂದ್ರದಲ್ಲಿ ಅವರ ಅವಧಿ ಎರಡು ತಿಂಗಳು ಮಾತ್ರ. ಯಾವ ರೀತಿ ಮಂತ್ರಿ ಸ್ಥಾನ ನೀಡುತ್ತಾರೋ ಗೊತ್ತಿಲ್ಲ’ ಎಂದರು.</p>.<p>‘ವಿರೋಧ ಪಕ್ಷದ ಜವಾಬ್ದಾರಿ ಮರೆತು ಕುರ್ಚಿಗಾಗಿ ಬಿಜೆಪಿಯವರು ಏನೆಲ್ಲಾ ಕಸರತ್ತು ನಡೆಸುತ್ತಿದ್ದಾರೆ ಎಂಬುದನ್ನು ರಾಜ್ಯದ ಜನ ನೋಡುತ್ತಿದ್ದಾರೆ. ಅಸಹ್ಯಕರ, ಕೀಳುಮಟ್ಟದ ರಾಜಕಾರಣಕ್ಕೆ ಇಳಿದಿದ್ದಾರೆ’ ಎಂದು ಟೀಕಿಸಿದರು.</p>.<p>‘ಹಿಂದೆ ಹೇಳಿದಂತೆ ಬಿಜೆಪಿಯ ಕೆಲ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ಎಲ್ಲವೂ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ಕಾದು ನೋಡಿ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>