ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜೆಡಿಎಸ್‌, ಕಾಂಗ್ರೆಸ್‌ ಶಾಸಕರಿಗೆ ಆಮಿಷ: ಸಾ.ರಾ.ಮಹೇಶ್‌

Last Updated 4 ಫೆಬ್ರುವರಿ 2019, 18:57 IST
ಅಕ್ಷರ ಗಾತ್ರ

ಮೈಸೂರು: ‘ಜೆಡಿಎಸ್‌, ಕಾಂಗ್ರೆಸ್‌ನ ಕೆಲ ಶಾಸಕರಿಗೆ ಮಂತ್ರಿ ಸ್ಥಾನ ನೀಡುವ ಆಮಿಷವನ್ನು ಬಿಜೆಪಿ ಮುಖಂಡರು ಮತ್ತೆ ಒಡ್ಡಿದ್ದಾರೆ. ದೂರವಾಣಿ ಕರೆ ಬಂದಿರುವ ವಿಚಾರವನ್ನು ಶಾಸಕರು ಮುಖ್ಯಮಂತ್ರಿ ಗಮನಕ್ಕೆ ಭಾನುವಾರ ತಂದಿದ್ದಾರೆ’ ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್‌ ಇಲ್ಲಿ ಸೋಮವಾರ ತಿಳಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ‘ನಮ್ಮ ಶಾಸಕರನ್ನು ಸೆಳೆಯಲು ಒಂದಲ್ಲಾ ಒಂದು ಆಸೆ ತೋರಿಸುತ್ತಿದ್ದಾರೆ. ಕೇಂದ್ರದಲ್ಲಿ ಅವರ ಅವಧಿ ಎರಡು ತಿಂಗಳು ಮಾತ್ರ. ಯಾವ ರೀತಿ ಮಂತ್ರಿ ಸ್ಥಾ‌ನ ನೀಡುತ್ತಾರೋ ಗೊತ್ತಿಲ್ಲ’ ಎಂದರು.

‘ವಿರೋಧ ಪಕ್ಷದ ಜವಾಬ್ದಾರಿ ಮರೆತು ಕುರ್ಚಿಗಾಗಿ ಬಿಜೆಪಿಯವರು ಏನೆಲ್ಲಾ ಕಸರತ್ತು ನಡೆಸುತ್ತಿದ್ದಾರೆ ಎಂಬುದನ್ನು ರಾಜ್ಯದ ಜನ ನೋಡುತ್ತಿದ್ದಾರೆ. ಅಸಹ್ಯಕರ, ಕೀಳುಮಟ್ಟದ ರಾಜಕಾರಣಕ್ಕೆ ಇಳಿದಿದ್ದಾರೆ‌’ ಎಂದು ಟೀಕಿಸಿದರು.

‘ಹಿಂದೆ ಹೇಳಿದಂತೆ ಬಿಜೆಪಿಯ ಕೆಲ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ. ಎಲ್ಲವೂ ಕ್ಲೈಮ್ಯಾಕ್ಸ್ ಹಂತ ತಲುಪಿದೆ. ಕಾದು ನೋಡಿ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT