ವಿಶ್ವನಾಥ್ ಅವರು ಪ್ರಮಾಣಮಾಡಿಲ್ಲವಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅದನ್ನು ತಾಯಿಯೇ ನೋಡಿಕೊಳ್ಳಲಿ ಎಂದರು. ಆಣೆಗೆ ಕರೆದಿದ್ದಾರೆ, ಬಂದಿದ್ದೇನೆ. ಅವರನ್ನು ಕರೆದುಕೊಂಡು ಬರುತ್ತೇನೆ ಅಂತ ನಾನು ಹೇಳಿಲ್ಲ.
ಸತ್ಯವಂತರು ಯಾರು ಎಂಬುದನ್ನು ತಾಯಿ ಚಾಮುಂಡೇಶ್ವರಿ, ಜನರು ತೀರ್ಮಾನ ಮಾಡುತ್ತಾರೆ. ಇನ್ನು ಮುಂದಿನ ದಿನಗಳಲ್ಲಿ ಅವರ ಬಗ್ಗೆ ಮಾತನಾಡಲಾರೆ ಎಂದು ಮಹೇಶ್ ಹೇಳಿದರು.