‘ದೇವರಲ್ಲಿ ಹರಕೆ ಕಟ್ಟಿದ್ದೇನೆ; ಅದು ಈಡೇರುವರೆಗೂ ಸಚಿವ ಸಂಪುಟ ಸಭೆಗೆ ಹಾಜರಾಗುವುದಿಲ್ಲ. ಈವರೆಗೆ 5 ಸಭೆಗಳಲ್ಲಿ ಭಾಗವಹಿಸಿಲ್ಲ ಎಂದು ಸ್ವತಃ ಸಚಿವರೇ ಈಚೆಗೆ ಹೇಳಿಕೆ ನೀಡಿದ್ದಾರೆ. ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದಲ್ಲಿ ಅಥವಾ ವಿದೇಶ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ಮಾತ್ರವೇ ಸಂಪುಟ ಸಭೆಗೆ ಗೈರುಹಾಜರಾದ ಉದಾಹರಣೆಗಳಿವೆ. ಆದರೆ, ಪ್ರಮುಖ ಖಾತೆ ಹೊಂದಿರುವ ಸಚಿವರು ದೇವರು, ಹರಕೆ ಎಂದು ಕಾರಣ ಹೇಳುತ್ತಿರುವುದು ಇದೇ ಮೊದಲು. ಈ ಮೂಲಕ ಅವರು ಸಂವಿಧಾನಕ್ಕೆ ಅಪಚಾರ ಎಸಗಿದ್ದಾರೆ’ ಎಂದು ಟೀಕಿಸಿದ್ದಾರೆ.