"ಕರ್ನಾಟಕ ಸರ್ಕಾರದ ಆದೇಶದಂತೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಕಟ್ಟಡ ನಿರ್ಮಾಣಕ್ಕೆ ಬೆಂಗಳೂರು ವಿಶ್ವವಿದ್ಯಾಲಯವು ಮಲ್ಲತ್ತಹಳ್ಳಿಯಲ್ಲಿ ಒಂದು ಎಕರೆ ಜಮೀನನ್ನು ಲೀಸ್ ಆದಾರದ ಮೇಲೆ ನೀಡಿದೆ. ಅಕಾಡೆಮಿಯ ಕಾರ್ಯಕಾರಿ ಸಮಿತಿಯ ನಿರ್ಣಯವನ್ನು ಒಪ್ಪಿ ಮುಂದಿನ ಆರ್ಥಿಕ ವರ್ಷದಲ್ಲಿ ಅನುದಾನ ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ಅನುದಾನ ಬಂದ ಕೂಡಲೇ ಕಟ್ಟಡ ನಿರ್ಮಾಣ ಕಾಮಗಾರಿ ಪ್ರಾರಂಭಿಸಲಾಗುವುದು. ಸದ್ಯ ಗುತ್ತಿಗೆ ನಿಯಮದಂತೆ ತನ್ನ ಕಾರ್ಯವನ್ನು ಸೆಂಟ್ರಲ್ ಕಾಲೇಜಿನ ಗ್ರಂಥಾಲಯದ ಕಟ್ಟಡದಲ್ಲಿ ಮುಂದುವರಿಸಲು ಅನುಮತಿ ನೀಡಬೇಕು. ಜತೆಗೆ, ಅಕಾಡೆಮಿಯ ವಿರುದ್ಧ ಬೆಂಗಳೂರು ಕೇಂದ್ರ ವಿಶ್ವವಿದ್ಯಾಲಯ ನ್ಯಾಯಾಲಯದಲ್ಲಿ ಹೂಡಿರುವ ದಾವೆಯನ್ನು ಹಿಂತೆಗೆದುಕೊಳ್ಳುವಂತೆ ಆದೇಶ ನೀಡಿ," ಎಂದು ಸಾಹಿತಿಗಳ ತಂಡ ಮನವಿ ಮಾಡಿದೆ.