ಬೆಂಗಳೂರು:ಇಂಧನ ಸಂರಕ್ಷಣೆ ಮತ್ತು ಉಳಿತಾಯದಲ್ಲಿ ಅತ್ಯುತ್ತಮ ಸಾಧನೆ ತೋರಿದ ರಸ್ತೆ ಸಾರಿಗೆ ನಿಗಮಗಳಿಗೆ ಗುರುವಾರ ನಗರದಲ್ಲಿ ಪೆಟ್ರೋಲಿಯಂ ಸಂರಕ್ಷಣಾ ಸಂಶೋಧನಾ ಸಂಸ್ಥೆ (ಪಿಸಿಆರ್ಎ) ವತಿಯಿಂದಪ್ರಶಸ್ತಿ, ನಗದು ಬಹುಮಾನ ನೀಡಿ ಗೌರವಿಸಲಾಯಿತು.
4,000ಕ್ಕಿಂತ ಹೆಚ್ಚು ಬಸ್ಗಳಿರುವ ನಿಗಮದ ವಿಭಾಗದಲ್ಲಿ ಅತ್ಯಂತ ಹೆಚ್ಚು ಇಂಧನ ದಕ್ಷತೆ ತೋರಿದ ಕಲಬುರ್ಗಿ ಈಶಾನ್ಯ ರಸ್ತೆ ಸಾರಿಗೆ ನಿಗಮವು ಮೊದಲ ಬಹುಮಾನಕ್ಕೆ (₹5 ಲಕ್ಷ) ಆಯ್ಕೆಯಾಗಿದ್ದು, ನವದೆಹಲಿಯಲ್ಲಿ ಗುರುವಾರ ಪ್ರಶಸ್ತಿ ಸ್ವೀಕರಿಸಿತು.ಇಂಧನ ಸಂರಕ್ಷಣೆ ಮತ್ತು ಉಳಿತಾಯದಲ್ಲಿ ಅತ್ಯುತ್ತಮ ಸಾಧನೆ ತೋರಿದ ನಾಲ್ಕು ನಿಗಮಗಳ ತಲಾ ಮೂರು ಡಿಪೊಗಳಿಗೆ ತಲಾ ₹50 ಸಾವಿರ ನಗದು ಬಹುಮಾನ ನೀಡಿ ಗೌರವಿಸಲಾಯಿತು.
ವಿಜೇತರಿಗೆ ಬಹುಮಾನ: ತೈಲ ಸಂರಕ್ಷಣೆ ಕುರಿತು ರಾಷ್ಟ್ರೀಯ ಮಟ್ಟದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್, ಜಪಾನ್ ಪ್ರವಾಸ ಹಾಗೂ ₹30 ಸಾವಿರ ನಗದು ಬಹುಮಾನ ಘೋಷಿಸಲಾಯಿತು.