<p><strong>ಬೆಂಗಳೂರು:</strong> ಪೊಲೀಸರ ವೇತನ ಪರಿಷ್ಕರಣೆ ಹಾಗೂ ಸೌಲಭ್ಯ ಹೆಚ್ಚಳ ಸಂಬಂಧ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದ ರಾಘವೇಂದ್ರ ಔರಾದಕರವರದಿಗೆ ಒಪ್ಪಿಗೆ ನೀಡಲು ಸರ್ಕಾರ ಮುಂದಾಗಿದೆ.</p>.<p>ಈ ವರದಿ ಜಾರಿಯಾದರೆ ಸರ್ಕಾರದ ಮೇಲೆ ಸುಮಾರು ₹630 ಕೋಟಿ ಹೆಚ್ಚುವರಿ ಹೊರೆ ಬೀಳಲಿದೆ. ವರದಿ ಜಾರಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಾತ್ವಿಕವಾಗಿ ಒಪ್ಪಿಗೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಔರಾದಕರವರದಿ ಜಾರಿ ಸಂಬಂಧ ಗೃಹ ಇಲಾಖೆ ವರದಿಯೊಂದನ್ನು ಸಿದ್ಧಪಡಿಸಿ ಆರ್ಥಿಕ ಇಲಾಖೆಗೆ ನೀಡಿದೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.</p>.<p>ಈ ವರದಿ ಜಾರಿಗೆ ಸಚಿವ ಸಂಪುಟ ಸಭೆ ಒಪ್ಪಿಗೆ ಕೊಡುವ ಅಗತ್ಯವಿಲ್ಲ. ಮುಖ್ಯಮಂತ್ರಿ ಸಹಿ ಮಾಡಿದರೆ ಸಾಕು. ಮುಂದಿನ ಸೋಮವಾರ ಆರ್ಥಿಕ ಇಲಾಖೆ ಒಪ್ಪಿಗೆ ನೀಡಲಿದ್ದು, ಅಂದೇ ಮುಖ್ಯಮಂತ್ರಿ ಸಹ ಸಹಿ ಮಾಡಲಿದ್ದಾರೆಎಂದು ಅವರು ಹೇಳಿದರು.</p>.<p>ಸರ್ಕಾರ2016ರ ಜೂನ್ನಲ್ಲಿ ಎಡಿಜಿಪಿ ರಾಘವೇಂದ್ರ ಔರಾದಕರ ಸಮಿತಿ ರಚಿಸಿತ್ತು. ಈ ಸಮಿತಿ ರಚನೆಯಾದ ಮೂರೇ ತಿಂಗಳಿನಲ್ಲಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ವರದಿ ಸಲ್ಲಿಸಿ ಮೂರು ವರ್ಷಗಳು ಕಳೆದರೂ ಈವರೆಗೂ ಜಾರಿಯ ಪ್ರಯತ್ನ ನಡೆದಿರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪೊಲೀಸರ ವೇತನ ಪರಿಷ್ಕರಣೆ ಹಾಗೂ ಸೌಲಭ್ಯ ಹೆಚ್ಚಳ ಸಂಬಂಧ ಸರ್ಕಾರಕ್ಕೆ ಸಲ್ಲಿಕೆಯಾಗಿದ್ದ ರಾಘವೇಂದ್ರ ಔರಾದಕರವರದಿಗೆ ಒಪ್ಪಿಗೆ ನೀಡಲು ಸರ್ಕಾರ ಮುಂದಾಗಿದೆ.</p>.<p>ಈ ವರದಿ ಜಾರಿಯಾದರೆ ಸರ್ಕಾರದ ಮೇಲೆ ಸುಮಾರು ₹630 ಕೋಟಿ ಹೆಚ್ಚುವರಿ ಹೊರೆ ಬೀಳಲಿದೆ. ವರದಿ ಜಾರಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಾತ್ವಿಕವಾಗಿ ಒಪ್ಪಿಗೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಔರಾದಕರವರದಿ ಜಾರಿ ಸಂಬಂಧ ಗೃಹ ಇಲಾಖೆ ವರದಿಯೊಂದನ್ನು ಸಿದ್ಧಪಡಿಸಿ ಆರ್ಥಿಕ ಇಲಾಖೆಗೆ ನೀಡಿದೆ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.</p>.<p>ಈ ವರದಿ ಜಾರಿಗೆ ಸಚಿವ ಸಂಪುಟ ಸಭೆ ಒಪ್ಪಿಗೆ ಕೊಡುವ ಅಗತ್ಯವಿಲ್ಲ. ಮುಖ್ಯಮಂತ್ರಿ ಸಹಿ ಮಾಡಿದರೆ ಸಾಕು. ಮುಂದಿನ ಸೋಮವಾರ ಆರ್ಥಿಕ ಇಲಾಖೆ ಒಪ್ಪಿಗೆ ನೀಡಲಿದ್ದು, ಅಂದೇ ಮುಖ್ಯಮಂತ್ರಿ ಸಹ ಸಹಿ ಮಾಡಲಿದ್ದಾರೆಎಂದು ಅವರು ಹೇಳಿದರು.</p>.<p>ಸರ್ಕಾರ2016ರ ಜೂನ್ನಲ್ಲಿ ಎಡಿಜಿಪಿ ರಾಘವೇಂದ್ರ ಔರಾದಕರ ಸಮಿತಿ ರಚಿಸಿತ್ತು. ಈ ಸಮಿತಿ ರಚನೆಯಾದ ಮೂರೇ ತಿಂಗಳಿನಲ್ಲಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಿತ್ತು. ವರದಿ ಸಲ್ಲಿಸಿ ಮೂರು ವರ್ಷಗಳು ಕಳೆದರೂ ಈವರೆಗೂ ಜಾರಿಯ ಪ್ರಯತ್ನ ನಡೆದಿರಲಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>