ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,‘ಗೌರಿ ಲಂಕೇಶ್ ಹತ್ಯೆ ಪ್ರಕರಣ ಸಂಬಂಧ ಎಸ್ಐಟಿ ತಂಡ, ವಿವಿಧ ಹಿಂದುತ್ವನಿಷ್ಠ ಸಂಘಟನೆಯ ಕಾರ್ಯಕರ್ತರ ವಿರುದ್ಧ ನ್ಯಾಯಾಲಯಕ್ಕೆ ಹೆಚ್ಚುವರಿ ದೋಷಾರೋಪ ಪಟ್ಟಿ ಸಲ್ಲಿಸಿದೆ. ಬಂಧಿತರು ಬೇರೆ ಸಂಘಟನೆಯವರಾಗಿದ್ದರೂ ಸನಾತನ ಸಂಸ್ಥೆಯನ್ನೇ ಗುರಿಯಾಗಿಸುವ ಪ್ರಯತ್ನ ಪಟ್ಟಿಯಲ್ಲಿ ಕಾಣಿಸುತ್ತಿದೆ’ ಎಂದರು.