ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕರ ಮನೆಯ ಎದುರೇ ಶ್ರೀ ಗಂಧದ ಮರ ಕಳ್ಳತನ

Last Updated 11 ಅಕ್ಟೋಬರ್ 2019, 14:01 IST
ಅಕ್ಷರ ಗಾತ್ರ

ಸೋಮವಾರಪೇಟೆ: ತಾಲ್ಲೂಕಿನ ಕುಂಬೂರು ಗ್ರಾಮದಲ್ಲಿರುವ ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಮನೆಯ ಕೈತೋಟದಲ್ಲಿ ಬೆಳೆದಿದ್ದ ಆರು ಶ್ರೀ ಗಂಧದ ಮರಗಳನ್ನು ಗುರುವಾರ ರಾತ್ರಿ ಕಳ್ಳತನ ಮಾಡಲಾಗಿದೆ.
ಶಾಸಕ ಅಪ್ಪಚ್ಚು ರಂಜನ್ ವಿಧಾನಸಭೆ ಅಧಿವೇಶನದಲ್ಲಿ ಭಾಗಿಯಾಗಲು ಪತ್ನಿ ಸಮೇತ ಬೆಂಗಳೂರಿಗೆ ತೆರಳಿದ್ದರು. ಮನೆಗೆ ಬೀಗ ಹಾಕಿದ್ದು, ಗೇಟ್ ಸಮೀಪದ ಲೈನ್ ಮನೆಯಲ್ಲಿ ವಾಸವಿದ್ದ ವಾಚಮನ್ ನಿದ್ರೆಗೆ ಜಾರಿದ ಮೇಲೆ ಕಳ್ಳತನ ಮಾಡಲಾಗಿದೆ ಎನ್ನಲಾಗಿದೆ.

ಸ್ಥಳಕ್ಕೆ ಸೋಮವಾರಪೇಟೆ ಸಿಪಿಐ ನಂಜುಂಡೇಗೌಡ, ಠಾಣಾಧಿಕಾರಿ ಶಿವಶಂಕರ್, ಆರ್.ಎಫ್.ಒ. ಶಮಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳಕ್ಕೆ ಶ್ವಾನದಳವನ್ನು ಕರೆಸಲಾಗಿದೆ. ಠಾಣಾಧಿಕಾರಿ ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT