ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀಲಾ ಅವರಿಂದ ಆತ್ಮವಂಚನೆ: ಸಾಣೆಹಳ್ಳಿ ಪಂಡಿತಾರಾಧ್ಯ ಶ್ರೀ ಅಸಮಾಧಾನ

Last Updated 2 ಆಗಸ್ಟ್ 2019, 18:51 IST
ಅಕ್ಷರ ಗಾತ್ರ

ಉಡುಪಿ: ಮಂಡ್ಯದಲ್ಲಿ ಪುಸ್ತಕ ಬಿಡುಗಡೆ ಕಾರ್ಯಕ್ರಮ ಇರುವ ಕಾರಣ ‘ಮತ್ತೆ ಕಲ್ಯಾಣ’ ಕಾರ್ಯಕ್ರಮದಲ್ಲಿ ಭಾಗವಹಿಸಲಾಗುತ್ತಿಲ್ಲ ಎಂದು ಚಿಂತಕಿ ಕೆ.ನೀಲಾ ತಿಳಿಸಿದ್ದರು. ಬಳಿಕ, ಮೋಹನ್ ಆಳ್ವ ಅವರಂಥವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಕ್ಕೆ ಗೈರಾಗುತ್ತಿದ್ದೇನೆ ಎಂದು ಮಾಧ್ಯಮಗಳ ಮುಂದೆ ಸುಳ್ಳು ಹೇಳಿದ್ದಾರೆ ಎಂದು ಸಾಣೆಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀಗಳು ಅಸಮಾಧಾನ ವ್ಯಕ್ತಪಡಿಸಿದರು.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾನವೀಯ ಅಂತಃಕರಣ ಇರುವ ವ್ಯಕ್ತಿಗಳಿಗೆ ಕಾರ್ಯಕ್ರಮಕ್ಕೆ ಸ್ವಾಗತವಿದೆ. ಅಹಂಕಾರ, ಹಮ್ಮು–ಬಿಮ್ಮುಗಳಿದ್ದರಿಗೆ ಸ್ವಾಗತವಿಲ್ಲ. ನೀಳಾ ಅವರದ್ದು ಆತ್ಮವಂಚನೆಯ ಕೆಲಸ ಎಂದು ಟೀಕಿಸಿದರು.

‘ಮತ್ತೆ ಕಲ್ಯಾಣ’ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಉಪನ್ಯಾಸಕರ ಹೆಸರನ್ನು ಮಾತ್ರ ಶ್ರೀಮಠ ಮುದ್ರಿಸುತ್ತದೆ. ಸ್ಥಳೀಯವಾಗಿ ಅಧ್ಯಕ್ಷತೆ ವಹಿಸುವವರನ್ನು ಆಯ್ಕೆಮಾಡುವ ಅಧಿಕಾರವನ್ನು ಜಿಲ್ಲಾ ಸಮಿತಿಗೆ ಕೊಡಲಾಗಿದೆ. ಆಚಾರ–ವಿಚಾರ ಶುದ್ಧವಿರುವ, ಬಸವತತ್ವದ ಪರ ಒಲವಿರುವ, ಜನರ ಪ್ರೀತಿ ಗಳಿಸಿದ ವ್ಯಕ್ತಿಯನ್ನು ಆಹ್ವಾನಿಸುವಂತೆ ಸೂಚನೆ ನೀಡಲಾಗಿರುತ್ತದೆ. ಅದರಂತೆ, ಸ್ಥಳೀಯ ಸಮಿತಿಯ ಆಯ್ಕೆ ಸ್ವಾತಂತ್ರ್ಯವನ್ನು ಗೌರವಿಸಬೇಕಾಗುತ್ತದೆ’ ಎಂದರು.

‘ನೀಲಾ ಕಾರ್ಯಕ್ರಮದಲ್ಲಿ ಭಾಗವಹಿಸಿ ನಿಲುವುಗಳನ್ನು ಮಂಡಿಸಿ ಪ್ರತಿಭಟಿಸಿದ್ದರೆ ಸ್ವಾಗತಿಸುತ್ತಿದ್ದೆ.ಕಸಬಿದ್ದ ಕಡೆ ಕಸ ಗುಡಿಸುವುದು ಪೊರಕೆಯ ಕೆಲಸ. ಅಲ್ಲಿ ಗುಡಿಸುವುದಿಲ್ಲ, ಇಲ್ಲಿ ಗುಡಿಸುವುದಿಲ್ಲ ಎಂದರೆ ಅದನ್ನು ಪೊರಕೆ ಎನ್ನುವುದಿಲ್ಲ’ ಎಂದು ಮಾರ್ಮಿಕವಾಗಿ ನುಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT