ಮಂಗಳೂರು: ‘ಕಲಾಪ ವರದಿಗೆ ಕೇವಲ ದೂರದರ್ಶನಕ್ಕೆ ಅವಕಾಶ ಕೊಟ್ಟಿರುವುದು ಸರಿಯಲ್ಲ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗದಂತೆ ಮಾಧ್ಯಮವನ್ನೂ ಕೂಡ ಸಂವಿಧಾನದ ಒಂದು ಅಂಗ ಎಂದು ತಿಳಿದುಕೊಳ್ಳಬೇಕು. ಸರ್ಕಾರಿ ಸಂಸ್ಥೆಗಳ ಜತೆಗೆ ಖಾಸಗಿ ವಾಹಿನಿಗಳಿಗೂ ಕಲಾಪ ವರದಿ ಮಾಡಲು ಅವಕಾಶ ಮಾಡಿಕೊಡಬೇಕು’ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಎನ್. ಸಂತೋಷ್ ಹೆಗ್ಡೆ ಅಭಿಪ್ರಾಯಪಟ್ಟರು.