ರಾಯಚೂರು: ’ದೇಶದಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೊಳಿಸುವ ತಯಾರಿಯಲ್ಲಿರುವ ರಾಷ್ಟ್ರೀಯ ಶಿಕ್ಷಣ ಆಯೋಗವು ಪ್ರಧಾನಮಂತ್ರಿ ಕೈಯಲ್ಲಿದ್ದು, ಮುಂದಿನ ದಿನಗಳಲ್ಲಿ ದ್ವೇಷ ಬಿತ್ತುವ ಶಿಕ್ಷಣ ಬರುವ ಆತಂಕ ಕಾಡುತ್ತಿದೆ’ ಎಂದು ಐಎಎಸ್ ಹುದ್ದೆಗೆ ರಾಜೀನಾಮೆ ಸಲ್ಲಿಸಿರುವ ಸಸಿಕಾಂತ್ ಸೆಂಥಿಲ್ ಅವರು ಕೇಂದ್ರದ ವಿರುದ್ಧ ವಾಗ್ದಾಳಿ ಮುಂದುವರಿಸಿದರು.