ಬೆಳಗಾವಿ: ‘ಅರಣ್ಯ ಹಕ್ಕಿಲ್ಲದವರನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್ ಯಾವ ಆಧಾರದ ಮೇಲೆ ಆದೇಶ ನೀಡಿದೆ ಎನ್ನುವುದನ್ನು ಅಧ್ಯಯನ ಮಾಡುತ್ತೇವೆ. ಮುಂದೆ ಏನು ಮಾಡಬೇಕು ಎನ್ನುವುದನ್ನು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ, ತೀರ್ಮಾನ ಕೈಗೊಳ್ಳುತ್ತೇವೆ’ ಎಂದು ಅರಣ್ಯ ಸಚಿವ ಸತೀಶ ಜಾರಕಿಹೊಳಿ ಶುಕ್ರವಾರ ಇಲ್ಲಿ ತಿಳಿಸಿದರು.