ಕೂಡ್ಲಿಗಿ: ಸಹೋದರ ರಮೇಶ ಜಾರಕಿಹೊಳಿ ಯಾವುದೇ ಕಾರಣಕ್ಕೂ ಪಕ್ಷ ಬಿಟ್ಟು ಹೋಗುವುದಿಲ್ಲ. ಕಾಂಗ್ರೆಸ್ ಪಕ್ಷದಲ್ಲಿಯೇ ಉಳಿಯಲಿದ್ದು ಎಲ್ಲವೂ ಸುಗಮವಾಗಿ ನಡೆಯಲಿದೆ ಎಂದು ಅರಣ್ಯ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.
ಅವರು ಪಟ್ಟಣದ ಪ್ರವಾಸಿಮಂದಿರಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದರು.
ಪಕ್ಷದಲ್ಲಿ ಯಾವುದೇ ಸಮಸ್ಯೆ ಇಲ್ಲ. ಸರ್ಕಾರ ಸುಗಮವಾಗಿ ನಡೆಯಲಿದೆ ಎಂದರು.
ಭಾನುವಾರ ಸೇರಿದಂತೆಕಳೆದ ಒಂದು ವಾರದಲ್ಲಿ ಕೂಡ್ಲಿಗಿ ಸುತ್ತಮುತ್ತ ಇಬ್ಬರು ರೈತರ ಮೇಲೆ ಕರಡಿ ದಾಳಿ ನಡೆಸಿರುವ ಬಗ್ಗೆ ಸಚಿವರ ಗಮನಕ್ಕೆ ತಂದಾಗ, ಶೀಘ್ರದಲ್ಲಿಯೇ ಅಧಿಕಾರಿಗಳ ಸಭೆ ಕರೆದು ಮಾಹಿತಿ ಪಡೆಯಲಾಗುವುದು ಎಂದರು.