ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸತೀಶ ಜಾರಕಿಹೊಳಿ ಸಾಹುಕಾರ್ರು.. ನಾವು ಪ್ರಜೆಗಳಷ್ಟೇ: ಡಿಕೆಶಿ

Last Updated 29 ಏಪ್ರಿಲ್ 2019, 11:25 IST
ಅಕ್ಷರ ಗಾತ್ರ

ಬೆಂಗಳೂರು: ‘ಸತೀಶಜಾರಕಿಹೊಳಿ ಸಾಹುಕಾರ, ನಾಯಕ..ನಾವು ಪ್ರಜೆಗಳು ಮಾತ್ರ. ಪಕ್ಷ ಏನು ಕೆಲಸ ವಹಿಸಿದೆಯೋ ಅದನ್ನು ಮಾಡುತ್ತೇನೆ ಅಷ್ಟೆ’ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಹೇಳಿದರು.

ಕುಂದಗೋಳ ಉಪ ಚುನಾವಣೆಯ ಉಸ್ತುವಾರಿಯನ್ನು ಶಿವಕುಮಾರ್‌ ಅವರಿಗೆ ಕಾಂಗ್ರೆಸ್‌ ವಹಿಸಿದೆ.

‘ಉತ್ತರ ಕರ್ನಾಟಕ ಭಾಗಕ್ಕೆ ನಾವಿದ್ದೇವೆ’ ಎಂದು ಸತೀಶ ಜಾರಕಿಹೊಳಿ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಬಳ್ಳಾರಿಯಲ್ಲೂ ದೊಡ್ಡ ದೊಡ್ಡ ನಾಯಕರು ಇದ್ದರು. ಮೈಸೂರು, ಗುಂಡ್ಲುಪೇಟೆ ಸೇರಿ ಹಲವು ಉಪ ಚುನಾವಣೆಯಲ್ಲಿ ಕೆಲಸ ಮಾಡಿ ಅಂದಿದ್ದರು. ಹೋಗಿ ಅಂದ್ರೆ ಹೋಗುತ್ತೇನೆ. ಬೇಡ ಅಂದರೆ ಹೋಗುವುದಿಲ್ಲ. ಪಕ್ಷ ಹೇಳಿದ ಮೇಲೆ ನಾನು ಕೇಳಲೇಬೇಕಾಗುತ್ತದೆ’ ಎಂದರು.

‘ಕೋರ್ಟ್ ಕೇಸ್ ಇದ್ದ ಕಾರಣ ಇಂದು ಕುಂದಗೋಳಕ್ಕೆ ಹೋಗಲು‌ ಸಾಧ್ಯವಾಗಲಿಲ್ಲ. ನಾಳೆಯೂ ವಿಚಾರಣೆ ಮುಂದುವರೆಯಲಿದೆ’ ಎಂದರು.

‘ಸಿ.ಎಸ್ ಶಿವಳ್ಳಿ ಹಾಗೂ ನನ್ನ ಸಂಬಂಧ ಯಾರಿಗೂ ಬಿಡಿಸಿ ಹೇಳಬೇಕಾಗಿಲ್ಲ. ಶಿವಳ್ಳಿಯನ್ನು ಕಾಂಗ್ರೆಸ್ ಪಕ್ಷಕ್ಕೆ ಸೇರಿಸಿದ್ದೇ ನಾನು’ ಎಂದರು.

‘ನನ್ನ ಕುಟುಂಬವನ್ನು ಕರೆದುಕೊಂಡು ಎಲ್ಲಾದರೂ ಹೋಗಿ ಬರೋಣ ಅಂದುಕೊಂಡಿದ್ದೆ. ಆದರೆ, ಪಕ್ಷದ ಕೆಲಸದಿಂದ ಹೋಗಲು ಸಾಧ್ಯವಾಗಿಲ್ಲ’ ಎಂದರು.

ಎಸ್.ಟಿ. ಸೋಮಶೇಖರ್ ಕರೆದಿರುವ ಸಮಾನ ಮನಸ್ಕ ಶಾಸಕರ ಸಭೆಯ ಬಗ್ಗೆ ಮಾತನಾಡಿದ ಶಿವಕುಮಾರ್, ‘ ಬೇರೆ ಪಕ್ಷಗಳಲ್ಲೂ ಅಧಿಕೃತ, ಅನಧಿಕೃತವಾಗಿ ಶಾಸಕರು ಸೇರುತ್ತಾರೆ. ಅವರ ಸಮಸ್ಯೆಗಳಿದ್ದರೆ ಅದನ್ನು ಹೇಳಿಕೊಳ್ಳುತ್ತಾರೆ. ಅದರಲ್ಲಿ ತಪ್ಪು ಏನಿದೆ. ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರಿಗೂ ಎಸ್.ಟಿ ಸೋಮಶೇಖರ್ ಅವರಿಗೂ ಉತ್ತಮ ಬಾಂಧವ್ಯವಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT