<p><strong>ಬೆಳಗಾವಿ:</strong>‘ಸೋದರ, ಶಾಸಕ ರಮೇಶ ಜಾರಕಿಹೊಳಿ ಎಲ್ಲಿ ಹೋಗಿದ್ದಾರೋ ಗೊತ್ತಿಲ್ಲ. ನಾವೂ ಅವರನ್ನು ಹುಡುಕುತ್ತಿದ್ದೇವೆ. ಇದುವರೆಗೂ ಹೈಕಮಾಂಡ್ ಸಂಪರ್ಕಕ್ಕೂ ಸಿಕ್ಕಿಲ್ಲ' ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.</p>.<p>ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಅವರು ತುಂಬಾ ಹಠವಾದಿ. ಸಚಿವ ಸಂಪುಟದಿಂದ ಕೈಬಿಟ್ಟಿದ್ದಕ್ಕೆ ಬೇಸರಗೊಂಡಿದ್ದಾರೆ.ಅವರು ಬಂದ ಮೇಲೆ ಮಾತನಾಡಿಸಮಸ್ಯೆ ಬಗೆಹರಿಸುತ್ತೇವೆ' ಎಂದರು.</p>.<p>‘ಅರಣ್ಯ ಖಾತೆ ನೀಡಿರುವುದಕ್ಕೆ ಅಸಮಾಧಾನ ಇಲ್ಲ. ಅದೂ ದೊಡ್ಡ ಹಾಗೂ ಸಾರ್ವಜನಿಕರಿಗೆ ಹತ್ತಿರವಾದುದು. ಬಹಳ ಕೆಲಸ ಮಾಡುವುದಕ್ಕೆ ಅವಕಾಶವಿದೆ. ಹೀಗಾಗಿ ಅನ್ಯಾಯದ ಪ್ರಶ್ನೆ ಇಲ್ಲ, ಕೊಟ್ಟಿರುವ ಜವಾಬ್ದಾರಿ ನಿರ್ವಹಿಸುತ್ತೇನೆ’ ಎಂದರು.</p>.<p><strong>‘ಸಂಪರ್ಕಕ್ಕೆ ಸಿಗುತ್ತಿಲ್ಲ’</strong><br /><strong>ಬಾಗಲಕೋಟೆ:</strong> ‘ರಮೇಶ ಜಾರಕಿಹೊಳಿ ಬೆಳಗಾವಿಯಲ್ಲೇ ಇದ್ದಾರೆ. ಆದರೆ ದೂರವಾಣಿ ಸಂಪರ್ಕಕ್ಕೆ ಸಿಗುತ್ತಿಲ್ಲ’ ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದರು.</p>.<p>ಬಾದಾಮಿಯಲ್ಲಿ ಮಾತನಾಡಿದ ಅವರು, ‘ರಮೇಶ ಕಾಂಗ್ರೆಸ್ನ ಮನುಷ್ಯ ಅವರೆಲ್ಲೂ ಹೋಗುವುದಿಲ್ಲ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಸ್ವಲ್ಪ ಅಸಮಾಧಾನ ಇರುತ್ತದೆ. ಎಲ್ಲವೂ ಸರಿ ಹೋಗುತ್ತದೆ’ ಎಂದರು.</p>.<p>24 ಗಂಟೆಯಲ್ಲಿ ಸರ್ಕಾರ ಪತನ ಎಂದು ಮಾಜಿ ಸಚಿವ ಉಮೇಶ ಕತ್ತಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ‘ ಬಿಜೆಪಿಯವರು ಬರೀ ಸುಳ್ಳು ಹೇಳುತ್ತಾರೆ. ಅವರಿಗೆಲ್ಲಾ ಉತ್ತರ ಕೊಡುವುದಕ್ಕೆ ನಮಗೆ ಬೇರೆ ಕೆಲಸ ಇಲ್ಲವೇ’ ಎಂದರು.</p>.<p><strong>ಇವನ್ನೂ ಓದಿ...<br />*<a href="https://www.prajavani.net/stories/stateregional/ramesh-jarakiholi-try-meet-597777.html" target="_blank">ಅಮಿತ್ ಶಾ ಭೇಟಿಗೆ ರಮೇಶ್ ಜಾರಕಿಹೊಳಿ ಯತ್ನ?</a></strong></p>.<p><strong>*<a href="https://www.prajavani.net/stories/stateregional/failure-handling-596853.html" target="_blank"></a></strong><a href="https://www.prajavani.net/stories/stateregional/failure-handling-596853.html" target="_blank"><strong>‘ಸಮರ್ಪಕವಾಗಿ ಖಾತೆ ನಿರ್ವಹಿಸದಿದ್ದಕ್ಕಾಗಿ ರಮೇಶಗೆ ಕೊಕ್’: ಸತೀಶ ಜಾರಕಿಹೊಳಿ</strong></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong>‘ಸೋದರ, ಶಾಸಕ ರಮೇಶ ಜಾರಕಿಹೊಳಿ ಎಲ್ಲಿ ಹೋಗಿದ್ದಾರೋ ಗೊತ್ತಿಲ್ಲ. ನಾವೂ ಅವರನ್ನು ಹುಡುಕುತ್ತಿದ್ದೇವೆ. ಇದುವರೆಗೂ ಹೈಕಮಾಂಡ್ ಸಂಪರ್ಕಕ್ಕೂ ಸಿಕ್ಕಿಲ್ಲ' ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.</p>.<p>ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಅವರು ತುಂಬಾ ಹಠವಾದಿ. ಸಚಿವ ಸಂಪುಟದಿಂದ ಕೈಬಿಟ್ಟಿದ್ದಕ್ಕೆ ಬೇಸರಗೊಂಡಿದ್ದಾರೆ.ಅವರು ಬಂದ ಮೇಲೆ ಮಾತನಾಡಿಸಮಸ್ಯೆ ಬಗೆಹರಿಸುತ್ತೇವೆ' ಎಂದರು.</p>.<p>‘ಅರಣ್ಯ ಖಾತೆ ನೀಡಿರುವುದಕ್ಕೆ ಅಸಮಾಧಾನ ಇಲ್ಲ. ಅದೂ ದೊಡ್ಡ ಹಾಗೂ ಸಾರ್ವಜನಿಕರಿಗೆ ಹತ್ತಿರವಾದುದು. ಬಹಳ ಕೆಲಸ ಮಾಡುವುದಕ್ಕೆ ಅವಕಾಶವಿದೆ. ಹೀಗಾಗಿ ಅನ್ಯಾಯದ ಪ್ರಶ್ನೆ ಇಲ್ಲ, ಕೊಟ್ಟಿರುವ ಜವಾಬ್ದಾರಿ ನಿರ್ವಹಿಸುತ್ತೇನೆ’ ಎಂದರು.</p>.<p><strong>‘ಸಂಪರ್ಕಕ್ಕೆ ಸಿಗುತ್ತಿಲ್ಲ’</strong><br /><strong>ಬಾಗಲಕೋಟೆ:</strong> ‘ರಮೇಶ ಜಾರಕಿಹೊಳಿ ಬೆಳಗಾವಿಯಲ್ಲೇ ಇದ್ದಾರೆ. ಆದರೆ ದೂರವಾಣಿ ಸಂಪರ್ಕಕ್ಕೆ ಸಿಗುತ್ತಿಲ್ಲ’ ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೇಳಿದರು.</p>.<p>ಬಾದಾಮಿಯಲ್ಲಿ ಮಾತನಾಡಿದ ಅವರು, ‘ರಮೇಶ ಕಾಂಗ್ರೆಸ್ನ ಮನುಷ್ಯ ಅವರೆಲ್ಲೂ ಹೋಗುವುದಿಲ್ಲ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಸ್ವಲ್ಪ ಅಸಮಾಧಾನ ಇರುತ್ತದೆ. ಎಲ್ಲವೂ ಸರಿ ಹೋಗುತ್ತದೆ’ ಎಂದರು.</p>.<p>24 ಗಂಟೆಯಲ್ಲಿ ಸರ್ಕಾರ ಪತನ ಎಂದು ಮಾಜಿ ಸಚಿವ ಉಮೇಶ ಕತ್ತಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ‘ ಬಿಜೆಪಿಯವರು ಬರೀ ಸುಳ್ಳು ಹೇಳುತ್ತಾರೆ. ಅವರಿಗೆಲ್ಲಾ ಉತ್ತರ ಕೊಡುವುದಕ್ಕೆ ನಮಗೆ ಬೇರೆ ಕೆಲಸ ಇಲ್ಲವೇ’ ಎಂದರು.</p>.<p><strong>ಇವನ್ನೂ ಓದಿ...<br />*<a href="https://www.prajavani.net/stories/stateregional/ramesh-jarakiholi-try-meet-597777.html" target="_blank">ಅಮಿತ್ ಶಾ ಭೇಟಿಗೆ ರಮೇಶ್ ಜಾರಕಿಹೊಳಿ ಯತ್ನ?</a></strong></p>.<p><strong>*<a href="https://www.prajavani.net/stories/stateregional/failure-handling-596853.html" target="_blank"></a></strong><a href="https://www.prajavani.net/stories/stateregional/failure-handling-596853.html" target="_blank"><strong>‘ಸಮರ್ಪಕವಾಗಿ ಖಾತೆ ನಿರ್ವಹಿಸದಿದ್ದಕ್ಕಾಗಿ ರಮೇಶಗೆ ಕೊಕ್’: ಸತೀಶ ಜಾರಕಿಹೊಳಿ</strong></a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>