<p><strong>ಹುಬ್ಬಳ್ಳಿ:</strong> ಅಧಿಕಾರದ ಆಸೆಗಾಗಿ ಬಿಜೆಪಿ ಸೇರಿರುವ ರಮೇಶ ಜಾರಕಿಹೊಳಿ ದೊಡ್ಡ ರಾಷ್ಟ್ರೀಯ ಪಕ್ಷದಲ್ಲಿದ್ದಾರೆ. ಈಗ ಆ ಪಕ್ಷದ ವರಿಷ್ಠರು ಅಧಿಕಾರ ಕೊಡುವ ತನಕ ಕಾಯಲೇಬೇಕು. ಇದನ್ನು ಬಿಟ್ಟು ನನ್ನ ಜೊತೆ 17 ಜನ ಶಾಸಕರು ಇದ್ದಾರೆ ಎಂದರೆ ಯಾರೂ ಒಪ್ಪುವುದಿಲ್ಲ ಎಂದು ಕಾಂಗ್ರೆಸ್ ಶಾಸಕ ಸತೀಶ ಜಾರಕಿಹೊಳಿ ಹೇಳಿದರು.</p>.<p>ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಜಿಲ್ಲೆಯ ಜನ ಬಿಜೆಪಿ ಹಾಗೂ ಯಡಿಯೂರಪ್ಪ ಅವರನ್ನು ನೋಡಿ ಮತ ಹಾಕಿದ್ದಾರೆ ಹೊರತು ರಮೇಶ ಮುಖ ನೋಡಿ ಅಲ್ಲ ಎಂದರು.</p>.<p>ರಮೇಶ ಸೇರಿದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ಗೆ ಕೈ ಕೊಟ್ಟು ಹೋದ ಎಲ್ಲರಿಗೂ ಪಶ್ಚಾತ್ತಾಪ ಆಗಿದೆ. ಬಿಜೆಪಿ ರಾಷ್ಟ್ರೀಯ ಪಕ್ಷ. ಪಕ್ಷ ಹೇಳಿದ್ದನ್ನು ಕೇಳಲೇಬೇಕು. ಆದರೆ, ಕೈ ಕೊಟ್ಟು ಹೋದವರು ಅಂದುಕೊಂಡಂತೆ ಎಲ್ಲವೂ ಆಗುವುದಿಲ್ಲ ಎಂದರು.</p>.<p>ಬಿಜೆಪಿಯಲ್ಲಿಯೂ ಸರ್ಕಸ್ ನಡೆದಿದೆ. ಅವರಲ್ಲಿಯೂ ಸಾಕಷ್ಟು ಸಮಸ್ಯೆಗಳು ಇವೆ. ಅವುಗಳನ್ನು ಯಡಿಯೂರಪ್ಪ ನಿಭಾಯಿಸಬೇಕಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಬ್ಬಳ್ಳಿ:</strong> ಅಧಿಕಾರದ ಆಸೆಗಾಗಿ ಬಿಜೆಪಿ ಸೇರಿರುವ ರಮೇಶ ಜಾರಕಿಹೊಳಿ ದೊಡ್ಡ ರಾಷ್ಟ್ರೀಯ ಪಕ್ಷದಲ್ಲಿದ್ದಾರೆ. ಈಗ ಆ ಪಕ್ಷದ ವರಿಷ್ಠರು ಅಧಿಕಾರ ಕೊಡುವ ತನಕ ಕಾಯಲೇಬೇಕು. ಇದನ್ನು ಬಿಟ್ಟು ನನ್ನ ಜೊತೆ 17 ಜನ ಶಾಸಕರು ಇದ್ದಾರೆ ಎಂದರೆ ಯಾರೂ ಒಪ್ಪುವುದಿಲ್ಲ ಎಂದು ಕಾಂಗ್ರೆಸ್ ಶಾಸಕ ಸತೀಶ ಜಾರಕಿಹೊಳಿ ಹೇಳಿದರು.</p>.<p>ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಜಿಲ್ಲೆಯ ಜನ ಬಿಜೆಪಿ ಹಾಗೂ ಯಡಿಯೂರಪ್ಪ ಅವರನ್ನು ನೋಡಿ ಮತ ಹಾಕಿದ್ದಾರೆ ಹೊರತು ರಮೇಶ ಮುಖ ನೋಡಿ ಅಲ್ಲ ಎಂದರು.</p>.<p>ರಮೇಶ ಸೇರಿದಂತೆ ಕಾಂಗ್ರೆಸ್ ಹಾಗೂ ಜೆಡಿಎಸ್ಗೆ ಕೈ ಕೊಟ್ಟು ಹೋದ ಎಲ್ಲರಿಗೂ ಪಶ್ಚಾತ್ತಾಪ ಆಗಿದೆ. ಬಿಜೆಪಿ ರಾಷ್ಟ್ರೀಯ ಪಕ್ಷ. ಪಕ್ಷ ಹೇಳಿದ್ದನ್ನು ಕೇಳಲೇಬೇಕು. ಆದರೆ, ಕೈ ಕೊಟ್ಟು ಹೋದವರು ಅಂದುಕೊಂಡಂತೆ ಎಲ್ಲವೂ ಆಗುವುದಿಲ್ಲ ಎಂದರು.</p>.<p>ಬಿಜೆಪಿಯಲ್ಲಿಯೂ ಸರ್ಕಸ್ ನಡೆದಿದೆ. ಅವರಲ್ಲಿಯೂ ಸಾಕಷ್ಟು ಸಮಸ್ಯೆಗಳು ಇವೆ. ಅವುಗಳನ್ನು ಯಡಿಯೂರಪ್ಪ ನಿಭಾಯಿಸಬೇಕಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>