‘ನೆರೆಯಿಂದಾಗಿ ಆಸ್ತಿಪಾಸ್ತಿ, ಬೆಳೆ ಎಲ್ಲವನ್ನೂ ಕಳೆದುಕೊಂಡಿದ್ದೇವೆ. ಸರ್ಕಾರದಿಂದ ಈವರೆಗೂ ಪರಿಹಾರ ಬಂದಿಲ್ಲ. ಗ್ರಾಮ ಪಂಚಾಯ್ತಿ ಅಧ್ಯಕ್ಷ ಕೂಡ ನಮ್ಮ ಕಷ್ಟ ಕೇಳಲು ಬಂದಿಲ್ಲ. ಚುನಾವಣೆ ಬಂದಾಗ 40–50 ಮಂದಿ ಬರುತ್ತಾರೆ. ಆದರೆ, ನಮಗೆ ಏನೂ ಸೌಲಭ್ಯಗಳು ಸಿಕ್ಕಿಲ್ಲ’ ಎಂದು ಗ್ರಾಮದ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು. ಇದರಿಂದ ಉಪಮುಖ್ಯಮಂತ್ರಿ ಹಾಗೂ ಅಭ್ಯರ್ಥಿ ಮುಜುಗರ ಅನುಭವಿಸಬೇಕಾಯಿತು.