ಈ ನಿರ್ಧಾರವನ್ನು ವಾಸ್ತವವಾಗಿ ಎಲ್ಲ ಪಕ್ಷಗಳೂ ಸ್ವಾಗತಿಸಬೇಕಾಗಿತ್ತು. ಆದರೆ ದುರದೃಷ್ಟವಶಾತ್ ವಿರೋಧ ಪಕ್ಷಗಳು ಇದರಲ್ಲಿಯೂ ರಾಜಕೀಯದ ಅಪಸ್ವರ ಎತ್ತುತ್ತಾ ಮೊಸರಲ್ಲಿ ಕಲ್ಲು ಹುಡುಕುವ ಯತ್ನ ನಡೆಸುತ್ತಿರುವುದು ಖಂಡನೀಯ. ವೀರ ಸಾವರ್ಕರ್ ಅವರು ಬ್ರಿಟಿಷರ ವಿರುದ್ಧ ಹೋರಾಡಿ ಸೆರೆವಾಸ ಅನುಭವಿಸಿದ ರಾಷ್ಟ್ರ ಭಕ್ತರಾಗಿದ್ದಾರೆ. ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸವನ್ನು ಓದಿದ್ದರೆ ಸಾವರ್ಕರ್ ಅವರು ಎಷ್ಟೊಂದು ಧೀರ, ಅಪ್ರತಿಮ ಹೋರಾಟಗಾರ ಎಂಬುದು ಇವರಿಗೆ ಅರ್ಥವಾಗುತ್ತಿತ್ತು. ಇಂತಹ ಸ್ವಾತಂತ್ರ್ಯ ಹೋರಾಟಗಾರರ ಹೆಸರನ್ನಿಡದೆ ಮತ್ತೆ ಸೋನಿಯಾ ಗಾಂಧಿಯವರ ಹೆಸರನ್ನಿಡಬೇಕಿತ್ತೇ ಎಂದು ಪ್ರಶ್ನಿಸಿದ್ದಾರೆ.