ಬೆಂಗಳೂರು: ಭಾರತದ ಪ್ರಥಮ ಶಿಕ್ಷಕಿ ಸಾವಿತ್ರಿಬಾಯಿ ಫುಲೆ ಅವರ ಜಯಂತಿ ಆಚರಣೆ ಜನವರಿ 3ರಂದು ರಾಜ್ಯದ ಎಲ್ಲ ಶಾಲೆಗಳಲ್ಲಿ ನಡೆಯಲಿದೆ.
ಸಾವಿತ್ರಿಬಾಯಿ ಫುಲೆ ಅವರ ಆದರ್ಶ ಮಕ್ಕಳಿಗೆ ತಿಳಿಯಬೇಕು, ಹೀಗಾಗಿಎಲ್ಲಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಈ ವರ್ಷದಿಂದ ಅವರ ಜಯಂತಿ ಆಚರಿಸಲು ಸುತ್ತೋಲೆ ಹೊರಡಿಸುವಂತೆ ಸಚಿವ ಎಸ್.ಸುರೇಶ್ ಕುಮಾರ್ ಅವರು ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರಿಗೆ ಸೂಚಿಸಿದ್ದಾರೆ.