‘ಸಿ’ ಕೆಟಗರಿ ಗಣಿಗಳ ಹರಾಜು ಪ್ರಕ್ರಿಯೆ ಸೆ. 4ರಿಂದ ಆರಂಭವಾಗಲಿದೆ ಎಂಬ ಕರ್ನಾಟಕ ಸರ್ಕಾರದ ಪರ ವಕೀಲ ರಾಜು ರಾಮಚಂದ್ರನ್ ಅವರ ಹೇಳಿಕೆಯನ್ನು ದಾಖಲಿಸಿಕೊಂಡ ನ್ಯಾಯಪೀಠ, ಪುನರ್ವಸತಿ ಮತ್ತು ಪುನರುಜ್ಜೀವನ (ಆರ್ ಅಂಡ್ ಆರ್) ಕಾಮಗಾರಿ ಪೂರ್ಣಗೊಳಿಸಿದ್ದಾಗಿ ತಿಳಿಸಿ ಖಾತರಿ ಠೇವಣಿಯನ್ನು ಮರಳಿಸುವಂತೆ ಕೋರಿರುವ 10 ಗಣಿ ಗುತ್ತಿಗೆ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸುವಂತೆ ಸಿಇಸಿಗೆ ಸೂಚಿಸಿತು.