<p><strong>ನವದೆಹಲಿ:</strong> ಬಡ್ತಿ ಮೀಸಲಾತಿ ಕಾಯ್ದೆ ವಿರೋಧಿಸಿದ್ದ ಪ್ರಕರಣದ ತೀರ್ಪಿನ ಅನ್ವಯ ಹುದ್ದೆ ಆಧಾರಿತ ಮೀಸಲಾತಿ ನೀಡಬೇಕು ಹಾಗೂ ನೇಮಕಾತಿಯ ಆರಂಭಿಕ ಹಂತದಲ್ಲೇ ಕೆನೆಪದರದ ತತ್ವ ಪಾಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಾಮಾನ್ಯ ವರ್ಗದ ನೌಕರರು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ.</p>.<p>‘ಮೀಸಲಾತಿ ಆಧಾರದ ಮೇಲೆ ಬಡ್ತಿ ಹೊಂದಿರುವ ಸರ್ಕಾರಿ ನೌಕರರಿಗೆ ತತ್ಪರಿಣಾಮ ಜ್ಯೇಷ್ಠತೆ ವಿಸ್ತರಿಸುವ’ ರಾಜ್ಯ ಸರ್ಕಾರದ ನೂತನ ಕಾಯ್ದೆಗೆ ಸಮ್ಮತಿ ಸೂಚಿಸಿ ಕಳೆದ ಮೇ 10ರಂದು ನೀಡಿರುವ ತೀರ್ಪಿನ ಮರು ಪರಿಶೀಲನೆ ಕೋರಿ ಅರ್ಜಿ ಸಲ್ಲಿಸಿರುವ ಬಿ.ಕೆ. ಪವಿತ್ರ ಮತ್ತಿತರರು ಈ ಅರ್ಜಿ ಸಲ್ಲಿಸಿದ್ದಾರೆ.</p>.<p>ಈ ಅರ್ಜಿಯ ವಿಚಾರಣೆಯನ್ನು ಮೊದಲು ತೀರ್ಪು ನೀಡಿರುವ ಪೀಠವೇ ಕೈಗೆತ್ತಿಕೊಳ್ಳಬೇಕು. ಆದರೂ ಯಾವಾಗ ವಿಚಾರಣೆ ಆರಂಭವಾಗಲಿದೆ ಎಂಬುದನ್ನು ತಿಳಿಸಲಾಗುವುದು. ಜುಲೈ 29ರಂದು ಈ ಕುರಿತು ನಿರ್ಧರಿಸಲಾಗುವುದು ಎಂದು ನ್ಯಾಯಮೂರ್ತಿಗಳಾದ ಯು.ಯು. ಲಲಿತ್ ಹಾಗೂ ವಿನೀತ್ ಶರಣ್ ಅವರಿದ್ದ ಪೀಠ ಶುಕ್ರವಾರ ಅಭಿಪ್ರಾಯಪಟ್ಟಿತು.</p>.<p>ಬಿ.ಕೆ. ಪವಿತ್ರ ಪ್ರಕರಣದಲ್ಲಿ ನ್ಯಾಯಮೂರ್ತಿಗಳಾದ ಯು.ಯು. ಲಲಿತ್ ಹಾಗೂ ಡಿ.ವೈ. ಚಂದ್ರಚೂಡ್ ಅವರಿದ್ದ ಪೀಠ ತೀರ್ಪು ನೀಡಿತ್ತು.</p>.<p>ಮೇ 10ರ ತೀರ್ಪಿನ ಮರು ಪರಿಶೀಲನೆ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕೆಲವು ದಿನಗಳ ಕಾಲ ಮುಂದೂಡಬೇಕು ಹಿರಿಯ ವಕೀಲರಾದ ರಾಜೀವ್ ಧವನ್ ಹಾಗೂ ಕುಮಾರ್ ಪರಿಮಳ್ ನ್ಯಾಯಪೀಠಕ್ಕೆ ಇದೇ ವೇಳೆ ಮನವಿ ಮಾಡಿದರು.</p>.<p>ಆದರೆ, ಈಗಾಗಲೇ ಇತ್ಯರ್ಥವಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸದಾಗಿ ಸಲ್ಲಿಸಲಾದ ಈ ಅರ್ಜಿಯು ಸಮರ್ಥನೀಯವೇ ಎಂಬುದನ್ನು ಪ್ರಶ್ನಿಸಲಾಗುವುದು ಎಂದು ಎಸ್.ಸಿ, ಎಸ್.ಟಿ. ನೌಕರರ ಪರ ವಕೀಲರಾದ ಇಂದಿರಾ ಜೈಸಿಂಗ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> ಬಡ್ತಿ ಮೀಸಲಾತಿ ಕಾಯ್ದೆ ವಿರೋಧಿಸಿದ್ದ ಪ್ರಕರಣದ ತೀರ್ಪಿನ ಅನ್ವಯ ಹುದ್ದೆ ಆಧಾರಿತ ಮೀಸಲಾತಿ ನೀಡಬೇಕು ಹಾಗೂ ನೇಮಕಾತಿಯ ಆರಂಭಿಕ ಹಂತದಲ್ಲೇ ಕೆನೆಪದರದ ತತ್ವ ಪಾಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಾಮಾನ್ಯ ವರ್ಗದ ನೌಕರರು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದಾರೆ.</p>.<p>‘ಮೀಸಲಾತಿ ಆಧಾರದ ಮೇಲೆ ಬಡ್ತಿ ಹೊಂದಿರುವ ಸರ್ಕಾರಿ ನೌಕರರಿಗೆ ತತ್ಪರಿಣಾಮ ಜ್ಯೇಷ್ಠತೆ ವಿಸ್ತರಿಸುವ’ ರಾಜ್ಯ ಸರ್ಕಾರದ ನೂತನ ಕಾಯ್ದೆಗೆ ಸಮ್ಮತಿ ಸೂಚಿಸಿ ಕಳೆದ ಮೇ 10ರಂದು ನೀಡಿರುವ ತೀರ್ಪಿನ ಮರು ಪರಿಶೀಲನೆ ಕೋರಿ ಅರ್ಜಿ ಸಲ್ಲಿಸಿರುವ ಬಿ.ಕೆ. ಪವಿತ್ರ ಮತ್ತಿತರರು ಈ ಅರ್ಜಿ ಸಲ್ಲಿಸಿದ್ದಾರೆ.</p>.<p>ಈ ಅರ್ಜಿಯ ವಿಚಾರಣೆಯನ್ನು ಮೊದಲು ತೀರ್ಪು ನೀಡಿರುವ ಪೀಠವೇ ಕೈಗೆತ್ತಿಕೊಳ್ಳಬೇಕು. ಆದರೂ ಯಾವಾಗ ವಿಚಾರಣೆ ಆರಂಭವಾಗಲಿದೆ ಎಂಬುದನ್ನು ತಿಳಿಸಲಾಗುವುದು. ಜುಲೈ 29ರಂದು ಈ ಕುರಿತು ನಿರ್ಧರಿಸಲಾಗುವುದು ಎಂದು ನ್ಯಾಯಮೂರ್ತಿಗಳಾದ ಯು.ಯು. ಲಲಿತ್ ಹಾಗೂ ವಿನೀತ್ ಶರಣ್ ಅವರಿದ್ದ ಪೀಠ ಶುಕ್ರವಾರ ಅಭಿಪ್ರಾಯಪಟ್ಟಿತು.</p>.<p>ಬಿ.ಕೆ. ಪವಿತ್ರ ಪ್ರಕರಣದಲ್ಲಿ ನ್ಯಾಯಮೂರ್ತಿಗಳಾದ ಯು.ಯು. ಲಲಿತ್ ಹಾಗೂ ಡಿ.ವೈ. ಚಂದ್ರಚೂಡ್ ಅವರಿದ್ದ ಪೀಠ ತೀರ್ಪು ನೀಡಿತ್ತು.</p>.<p>ಮೇ 10ರ ತೀರ್ಪಿನ ಮರು ಪರಿಶೀಲನೆ ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕೆಲವು ದಿನಗಳ ಕಾಲ ಮುಂದೂಡಬೇಕು ಹಿರಿಯ ವಕೀಲರಾದ ರಾಜೀವ್ ಧವನ್ ಹಾಗೂ ಕುಮಾರ್ ಪರಿಮಳ್ ನ್ಯಾಯಪೀಠಕ್ಕೆ ಇದೇ ವೇಳೆ ಮನವಿ ಮಾಡಿದರು.</p>.<p>ಆದರೆ, ಈಗಾಗಲೇ ಇತ್ಯರ್ಥವಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸದಾಗಿ ಸಲ್ಲಿಸಲಾದ ಈ ಅರ್ಜಿಯು ಸಮರ್ಥನೀಯವೇ ಎಂಬುದನ್ನು ಪ್ರಶ್ನಿಸಲಾಗುವುದು ಎಂದು ಎಸ್.ಸಿ, ಎಸ್.ಟಿ. ನೌಕರರ ಪರ ವಕೀಲರಾದ ಇಂದಿರಾ ಜೈಸಿಂಗ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>