ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ,‘ ಜನಸಂಖ್ಯೆಗೆ ಅನುಗುಣವಾಗಿಪರಿಶಿಷ್ಟ ಜಾತಿ ಸಮುದಾಯದ ಮೀಸಲಾತಿ ಹೆಚ್ಚಿಸಲು ರಾಜ್ಯ ಸರ್ಕಾರ ಹೈಕೋರ್ಟ್ನ ನಿವೃತ್ತ ಮುಖ್ಯನ್ಯಾಯಮೂರ್ತಿಎಚ್.ಎನ್.ನಾಗಮೋಹನ್ ದಾಸ್ ನೇತೃತ್ವದಲ್ಲಿ ಆಯೋಗ ರಚಿಸಿದೆ. ಮೀಸಲಾತಿ ಪ್ರಮಾಣವನ್ನು ಶೇ 17ಕ್ಕೆ ಏರಿಕೆ ಮಾಡುವ ಅಂಶಗಳು ವರದಿಯಲ್ಲಿವೆ. ಆದರೆ, ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ನೋಡಿದಾಗ, ಈ ಮೀಸಲಾತಿ ಪ್ರಮಾಣ ಸಾಕಾಗುವುದಿಲ್ಲ. ಕನಿಷ್ಠ ಶೇ 20ರಷ್ಟು ಮೀಸಲಾತಿ ಸಮುದಾಯಕ್ಕೆ ಅವಶ್ಯಕ’ ಎಂದರು.