‘850 ಲಿಖಿತ ಅಹವಾಲುಸ್ವೀಕರಿಸಲಾಗಿದೆ. 42 ಸಮಾಲೋಚನಾ ಸಭೆಗಳನ್ನು ನಡೆಸಲಾಗಿದೆ. ಕಲಬುರ್ಗಿ, ಬೆಳಗಾವಿ, ಮೈಸೂರು ಮತ್ತು ಬೆಂಗಳೂರಿನಲ್ಲಿ ವಿಭಾಗ ಮಟ್ಟದ ಸಮಾಲೋಚನಾ ಸಭೆಗಳನ್ನು ನಡೆಸಿ ಸಾರ್ವಜನಿಕರ ಅಭಿಪ್ರಾಯ ಸಂಗ್ರಹಿಸಲಾಗಿದೆ.ಸಂಗ್ರಹವಾದ ಮಾಹಿತಿಯನ್ನು ವಿಶ್ಲೇಷಣೆ ಮಾಡಲಾಗಿದ್ದು, ವರದಿ ಅಂತಿಮಗೊಳಿಸುವ ಕಾರ್ಯ ನಡೆಯುತ್ತಿದೆ’ ಎಂದು ಅವರು ತಿಳಿಸಿದರು.