‘ಬಿ ವರದಿ ಸಲ್ಲಿಕೆಯಿಂದ ಅಂತ್ಯ ಗೊಂಡಿರುವ ಪ್ರಕರಣಗಳ ಪ್ರಮಾಣ ಶೇ 4.10ರಷ್ಟಿದ್ದರೆ. ರಾಜ್ಯದ 10 ಜಿಲ್ಲೆಗಳಲ್ಲಿ ಶಿಕ್ಷೆಯ ಪ್ರಮಾಣ ಶೂನ್ಯವಿದೆ. ಕಾಯ್ದೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸದೇ ಇರುವುದು, ಸರ್ಕಾರದ ಸುತ್ತೋಲೆಗಳನ್ನು ಅನುಷ್ಠಾನಕ್ಕೆ ತರಲು ಅಧಿಕಾರಿಗಳು ವಹಿಸಿರುವ ನಿರ್ಲಕ್ಷ್ಯ, ಕಾಲಕಾಲಕ್ಕೆ ಸಭೆಗಳು ನಡೆಯದಿರುವುದೇ ದೌರ್ಜನ್ಯ ಪ್ರಕರಣಗಳು ಹೆಚ್ಚಳವಾಗಲು ಕಾರಣ’ ಎಂದು ಸಮಿತಿಯ ರಾಜ್ಯ ಸಂಚಾಲಕಿ ಪಿ. ಯಶೋಧಾ ಆರೋಪಿಸಿದರು.