ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆ ಎಲ್ಲ ಶಾಲೆಗಳಿಗೆ ಸುತ್ತೋಲೆ ಕಳುಹಿಸಿದ್ದು, ಮಕ್ಕಳ ಶಿಕ್ಷಣ ಮುಂದುವರಿಸುವುದಕ್ಕೆ ಯಾವುದೇ ಅಡ್ಡಿ ಆಗಬಾರದು ಎಂದು ತಿಳಿಸಲಾಗಿದೆ. ಪ್ರವಾಹದಲ್ಲಿ ಆಧಾರ್, ಜನನ ಪ್ರಮಾಣ ಪತ್ರದಂತಹ ಪ್ರಮುಖ ದಾಖಲೆಗಳು ಕಳೆದು ಹೋದ ಅದೆಷ್ಟೋ ನಿದರ್ಶನಗಳಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ.