<p><strong>ಬೆಂಗಳೂರು:</strong> ರಾಜ್ಯದ ಎರಡು ಕಂದಾಯ ವಿಭಾಗ ವ್ಯಾಪ್ತಿಗಳ ಶಾಲಾ ಮಕ್ಕಳಿಗೆ ಈ ವರ್ಷ ಮೊದಲ ಸೆಟ್ನ ಸಮವಸ್ತ್ರ ಪೂರೈಕೆಯೇ ವಿಳಂಬವಾಗುವ ಸಾಧ್ಯತೆ ಇದೆ.</p>.<p>ಶಾಲೆ ಆರಂಭಕ್ಕೆ ಇನ್ನು 23 ದಿನವಷ್ಟೇ ಬಾಕಿ ಇದೆ. ಎರಡು ಕಂದಾಯ ವಿಭಾಗ ವ್ಯಾಪ್ತಿಯಲ್ಲಿ ಸಮವಸ್ತ್ರ ವಿತರಿಸಲು ಸಿದ್ಧತೆ ನಡೆದಿದೆ. ಆದರೆ ಇತರ ಎರಡು ವಿಭಾಗಗಳಲ್ಲಿ ಈ ಪ್ರಕ್ರಿಯೆ ಈಗಲೂ ಟೆಂಡರ್ ಹಂತದಲ್ಲಷ್ಟೇ ಇದೆ. ಹೀಗಿದ್ದರೂ ಶೀಘ್ರ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಭಾರ ಆಯುಕ್ತ ಎಂ.ಟಿ.ರೇಜು ಸೋಮವಾರ ಇಲ್ಲಿ ಪತ್ರಕರ್ತರಿಗೆ ತಿಳಿಸಿದರು.</p>.<p>ಮೊದಲ ಬಾರಿಗೆ ಕರೆದ ಟೆಂಡರ್ನಲ್ಲಿ ಒಬ್ಬರಷ್ಟೇ ಬಿಡ್ ಸಲ್ಲಿಸಿದ್ದರು. ಹೀಗಾಗಿ ಎರಡನೇ ಬಾರಿಗೆ ಟೆಂಡರ್ ಕರೆಯಲಾಗಿದೆ. ಶೀಘ್ರ ಬಿಡ್ದಾರರನ್ನು ಅಂತಿಮಗೊಳಿಸಿ ಸಮವಸ್ತ್ರ ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು. ಚುನಾವಣಾ ನೀತಿ ಸಂಹಿತೆಯಿಂದಾಗಿ ಈ ಪ್ರಕ್ರಿಯೆ ವಿಳಂಬವಾಗಿಲ್ಲ ಎಂದರು.</p>.<p>ನವದೆಹಲಿಯಲ್ಲಿ ಶೀಘ್ರದಲ್ಲೇ ಸರ್ವ ಶಿಕ್ಷಣ ಅಭಿಯಾನದ ಯೋಜನೆ ಅನುಷ್ಠಾನ ಸಭೆ ನಡೆಯಲಿದ್ದು, ರಾಜ್ಯದಲ್ಲಿ ಈ ವರ್ಷ ಎರಡು ಜೊತೆ ಸಮವಸ್ತ್ರ ನೀಡುವಂತೆ ಒತ್ತಾಯಿಸಲಾಗುವುದು. ಕೇಂದ್ರವು ಇದಕ್ಕೆ ಸಮ್ಮತಿ ನೀಡುವ ನಿರೀಕ್ಷೆ ಇದೆ ಎಂದು ಹೇಳಿದರು.</p>.<p>ಅರ್ಹ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆಗೂ ಸಿದ್ಧತೆ ನಡೆದಿದ್ದು, ಜೂನ್ 1ರ ವೇಳೆಗೆ ಎಲ್ಲರಿಗೂ ಸೈಕಲ್ ವಿತರಿಸುವುದು ಅಸಾಧ್ಯವಾಗಬಹುದು, ಆದರೆ ವಿತರಣೆಯಲ್ಲಿ ವಿಳಂಬ ಆಗದಂತೆ ಎಚ್ಚರ ವಹಿಸಲಾಗುವುದು ಎಂದರು.</p>.<p><strong>ಆಂಗ್ಲ ಮಾಧ್ಯಮ ಶಾಲೆ ಆರಂಭಕ್ಕೆ ಸಿದ್ಧತೆ</strong></p>.<p>‘ಈ ವರ್ಷದ ಬಜೆಟ್ನಲ್ಲಿ ಘೋಷಿಸಿದಂತೆ 1,000 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಕ್ಕೆ ಸಿದ್ಧತೆ ನಡೆಯುತ್ತಿದೆ’ ಎಂದುಎಂ.ಟಿ.ರೇಜು ವಿವರಿಸಿದರು. ‘ಇಂಗ್ಲಿಷ್ ಭಾಷೆಯ ಮೇಲೆ ಹಿಡಿತ ಇರುವ ರಾಜ್ಯದ 5 ಸಾವಿರ ಶಿಕ್ಷಕರನ್ನು ಗುರುತಿಸಿ ಅವರಿಗೆ ತರಬೇತಿ ನೀಡಲಾಗಿದೆ. ಕನ್ನಡ ಪಠ್ಯವನ್ನೇ ಇಂಗ್ಲಿಷ್ಗೆ ಭಾಷಾಂತರಿಸಿ ಬೋಧಿಸಲಾಗುತ್ತದೆ. ಗಣಿತ ಮತ್ತು ಇಂಗ್ಲಿಷ್ ಪಠ್ಯಗಳು ಎನ್ಸಿಇಆರ್ಟಿ ಪಠ್ಯಕ್ರಮದಲ್ಲಿ ಇರಲಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ರಾಜ್ಯದ ಎರಡು ಕಂದಾಯ ವಿಭಾಗ ವ್ಯಾಪ್ತಿಗಳ ಶಾಲಾ ಮಕ್ಕಳಿಗೆ ಈ ವರ್ಷ ಮೊದಲ ಸೆಟ್ನ ಸಮವಸ್ತ್ರ ಪೂರೈಕೆಯೇ ವಿಳಂಬವಾಗುವ ಸಾಧ್ಯತೆ ಇದೆ.</p>.<p>ಶಾಲೆ ಆರಂಭಕ್ಕೆ ಇನ್ನು 23 ದಿನವಷ್ಟೇ ಬಾಕಿ ಇದೆ. ಎರಡು ಕಂದಾಯ ವಿಭಾಗ ವ್ಯಾಪ್ತಿಯಲ್ಲಿ ಸಮವಸ್ತ್ರ ವಿತರಿಸಲು ಸಿದ್ಧತೆ ನಡೆದಿದೆ. ಆದರೆ ಇತರ ಎರಡು ವಿಭಾಗಗಳಲ್ಲಿ ಈ ಪ್ರಕ್ರಿಯೆ ಈಗಲೂ ಟೆಂಡರ್ ಹಂತದಲ್ಲಷ್ಟೇ ಇದೆ. ಹೀಗಿದ್ದರೂ ಶೀಘ್ರ ವಿತರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಭಾರ ಆಯುಕ್ತ ಎಂ.ಟಿ.ರೇಜು ಸೋಮವಾರ ಇಲ್ಲಿ ಪತ್ರಕರ್ತರಿಗೆ ತಿಳಿಸಿದರು.</p>.<p>ಮೊದಲ ಬಾರಿಗೆ ಕರೆದ ಟೆಂಡರ್ನಲ್ಲಿ ಒಬ್ಬರಷ್ಟೇ ಬಿಡ್ ಸಲ್ಲಿಸಿದ್ದರು. ಹೀಗಾಗಿ ಎರಡನೇ ಬಾರಿಗೆ ಟೆಂಡರ್ ಕರೆಯಲಾಗಿದೆ. ಶೀಘ್ರ ಬಿಡ್ದಾರರನ್ನು ಅಂತಿಮಗೊಳಿಸಿ ಸಮವಸ್ತ್ರ ಪೂರೈಕೆಗೆ ಕ್ರಮ ಕೈಗೊಳ್ಳಲಾಗುವುದು. ಚುನಾವಣಾ ನೀತಿ ಸಂಹಿತೆಯಿಂದಾಗಿ ಈ ಪ್ರಕ್ರಿಯೆ ವಿಳಂಬವಾಗಿಲ್ಲ ಎಂದರು.</p>.<p>ನವದೆಹಲಿಯಲ್ಲಿ ಶೀಘ್ರದಲ್ಲೇ ಸರ್ವ ಶಿಕ್ಷಣ ಅಭಿಯಾನದ ಯೋಜನೆ ಅನುಷ್ಠಾನ ಸಭೆ ನಡೆಯಲಿದ್ದು, ರಾಜ್ಯದಲ್ಲಿ ಈ ವರ್ಷ ಎರಡು ಜೊತೆ ಸಮವಸ್ತ್ರ ನೀಡುವಂತೆ ಒತ್ತಾಯಿಸಲಾಗುವುದು. ಕೇಂದ್ರವು ಇದಕ್ಕೆ ಸಮ್ಮತಿ ನೀಡುವ ನಿರೀಕ್ಷೆ ಇದೆ ಎಂದು ಹೇಳಿದರು.</p>.<p>ಅರ್ಹ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆಗೂ ಸಿದ್ಧತೆ ನಡೆದಿದ್ದು, ಜೂನ್ 1ರ ವೇಳೆಗೆ ಎಲ್ಲರಿಗೂ ಸೈಕಲ್ ವಿತರಿಸುವುದು ಅಸಾಧ್ಯವಾಗಬಹುದು, ಆದರೆ ವಿತರಣೆಯಲ್ಲಿ ವಿಳಂಬ ಆಗದಂತೆ ಎಚ್ಚರ ವಹಿಸಲಾಗುವುದು ಎಂದರು.</p>.<p><strong>ಆಂಗ್ಲ ಮಾಧ್ಯಮ ಶಾಲೆ ಆರಂಭಕ್ಕೆ ಸಿದ್ಧತೆ</strong></p>.<p>‘ಈ ವರ್ಷದ ಬಜೆಟ್ನಲ್ಲಿ ಘೋಷಿಸಿದಂತೆ 1,000 ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ಆರಂಭಕ್ಕೆ ಸಿದ್ಧತೆ ನಡೆಯುತ್ತಿದೆ’ ಎಂದುಎಂ.ಟಿ.ರೇಜು ವಿವರಿಸಿದರು. ‘ಇಂಗ್ಲಿಷ್ ಭಾಷೆಯ ಮೇಲೆ ಹಿಡಿತ ಇರುವ ರಾಜ್ಯದ 5 ಸಾವಿರ ಶಿಕ್ಷಕರನ್ನು ಗುರುತಿಸಿ ಅವರಿಗೆ ತರಬೇತಿ ನೀಡಲಾಗಿದೆ. ಕನ್ನಡ ಪಠ್ಯವನ್ನೇ ಇಂಗ್ಲಿಷ್ಗೆ ಭಾಷಾಂತರಿಸಿ ಬೋಧಿಸಲಾಗುತ್ತದೆ. ಗಣಿತ ಮತ್ತು ಇಂಗ್ಲಿಷ್ ಪಠ್ಯಗಳು ಎನ್ಸಿಇಆರ್ಟಿ ಪಠ್ಯಕ್ರಮದಲ್ಲಿ ಇರಲಿದೆ’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>