ಇಲ್ಲಿ ಶುಕ್ರವಾರ ನಡೆದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಮಹಾಸಭೆಯಲ್ಲಿ ಪಾಲ್ಗೊಂಡ ಅವರು, ‘2ನೇ ಜೊತೆ ಸಮವಸ್ತ್ರ ನೀಡ ಬೇಕೆಂಬುದು ಸರ್ಕಾರದ ನಿರ್ಧಾರ. ಈ ವರ್ಷವೇ ಅದನ್ನು ನೀಡಲು ಬದ್ಧರಾಗಿ ದ್ದೇವೆ.ಹಣಕಾಸು ಇಲಾಖೆಯ ಜತೆಗೆ ಚರ್ಚಿಸಲಾಗಿದೆ, ಮುಖ್ಯಮಂತ್ರಿಗಳ ಜತೆಗೂ ಮಾತನಾಡಿದ್ದೇನೆ. ಈ ವರ್ಷವೇ2ನೇ ಜೊತೆ ಸಮವಸ್ತ್ರ ಕೊಡಿಸಲುಎಲ್ಲಾ ಕ್ರಮ ಕೈಗೊಳ್ಳಲಾಗುವುದು. ಗುರುವಾರ ನಾನು ನೀಡಿದ ಹೇಳಿಕೆಯಲ್ಲಿ ಒಂದಿಷ್ಟು ವ್ಯತ್ಯಾಸವಾಗಿದೆ’ ಎಂದರು.