<p><strong>ಬೆಳಗಾವಿ: </strong>ಇಲ್ಲಿನ ವ್ಯಾಕ್ಸಿನ್ ಡಿಪೊ ಆವರಣದಲ್ಲಿರುವ ಬೃಹತ್ ಮರಗಳನ್ನು ಕತ್ತರಿಸಿರುವ ಕ್ರಮ ಪರಿಸರ ಪ್ರೇಮಿಗಳು ಹಾಗೂ ಪ್ರಜ್ಞಾವಂತರ ಆಕ್ರೋಶಕ್ಕೆ ಕಾರಣವಾಗಿದೆ.</p>.<p>ಹಲವು ವರ್ಷಗಳಿಂದ ಇದ್ದ ಹಾಗೂ ದೊಡ್ಡ ದೊಡ್ಡ ಮರಗಳಿಗೆ ಕೊಡಲಿ ಏಟು ಬಿದ್ದಿದೆ. ಹತ್ತಾರು ಮರಗಳ ಮಾರಣ ಹೋಮವೇ ನಡೆದಿದೆ. ಯಾವ ಕಾಮಗಾರಿಗಾಗಿ, ಯಾವ ಇಲಾಖೆಯವರು ಕಡಿತಲೆ ಮಾಡಿಸಿದ್ದಾರೆ ಎನ್ನುವುದು ಖಚಿತವಾಗಿ ಗೊತ್ತಾಗಿಲ್ಲ. ರಾತ್ರೋರಾತ್ರಿ ಇವುಗಳನ್ನು ಕಡಿದು ಉರುಳಿಸಲಾಗಿದೆ ಎಂದು ತಿಳಿದುಬಂದಿದೆ.</p>.<p>‘ಮರಗಳನ್ನು ನಾವು ಕತ್ತರಿಸುತ್ತಿಲ್ಲ. ಆದರೆ, ಕೆಲವು ಮರಗಳ ಕಡಿತಲೆಗೆ ಅರಣ್ಯ ಇಲಾಖೆಯವರನ್ನು ಕೋರಿದ್ದೆವು. ಸದ್ಯಕ್ಕೆ ಹೆಚ್ಚಿನ ಮಾಹಿತಿ ಇಲ್ಲ’ ಎಂದು ಸ್ಮಾರ್ಟ್ ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ಶಶಿಧರ ಕುರೇರ ತಿಳಿಸಿದರು.</p>.<p>‘ಸ್ಮಾರ್ಟ್ ಸಿಟಿ ಯೋಜನೆಯ ಕಚೇರಿಯಿಂದ ಮನವಿ ಬಂದಿತ್ತು. ಹೀಗಾಗಿ, ಮರಗಳನ್ನು ಕಡಿದು ತೆರವುಗೊಳಿಸಲಾಗುತ್ತಿದೆ. ಎಷ್ಟು ಮರಗಳನ್ನು ಕತ್ತರಿಸಲಾಗುವುದು ಎಂಬ ಮಾಹಿತಿ ಸದ್ಯಕ್ಕೆ ಇಲ್ಲ’ ಎಂದು ಆರ್ಎಫ್ಒ ರುದ್ರಪ್ಪ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ: </strong>ಇಲ್ಲಿನ ವ್ಯಾಕ್ಸಿನ್ ಡಿಪೊ ಆವರಣದಲ್ಲಿರುವ ಬೃಹತ್ ಮರಗಳನ್ನು ಕತ್ತರಿಸಿರುವ ಕ್ರಮ ಪರಿಸರ ಪ್ರೇಮಿಗಳು ಹಾಗೂ ಪ್ರಜ್ಞಾವಂತರ ಆಕ್ರೋಶಕ್ಕೆ ಕಾರಣವಾಗಿದೆ.</p>.<p>ಹಲವು ವರ್ಷಗಳಿಂದ ಇದ್ದ ಹಾಗೂ ದೊಡ್ಡ ದೊಡ್ಡ ಮರಗಳಿಗೆ ಕೊಡಲಿ ಏಟು ಬಿದ್ದಿದೆ. ಹತ್ತಾರು ಮರಗಳ ಮಾರಣ ಹೋಮವೇ ನಡೆದಿದೆ. ಯಾವ ಕಾಮಗಾರಿಗಾಗಿ, ಯಾವ ಇಲಾಖೆಯವರು ಕಡಿತಲೆ ಮಾಡಿಸಿದ್ದಾರೆ ಎನ್ನುವುದು ಖಚಿತವಾಗಿ ಗೊತ್ತಾಗಿಲ್ಲ. ರಾತ್ರೋರಾತ್ರಿ ಇವುಗಳನ್ನು ಕಡಿದು ಉರುಳಿಸಲಾಗಿದೆ ಎಂದು ತಿಳಿದುಬಂದಿದೆ.</p>.<p>‘ಮರಗಳನ್ನು ನಾವು ಕತ್ತರಿಸುತ್ತಿಲ್ಲ. ಆದರೆ, ಕೆಲವು ಮರಗಳ ಕಡಿತಲೆಗೆ ಅರಣ್ಯ ಇಲಾಖೆಯವರನ್ನು ಕೋರಿದ್ದೆವು. ಸದ್ಯಕ್ಕೆ ಹೆಚ್ಚಿನ ಮಾಹಿತಿ ಇಲ್ಲ’ ಎಂದು ಸ್ಮಾರ್ಟ್ ಸಿಟಿ ಯೋಜನೆಯ ವ್ಯವಸ್ಥಾಪಕ ನಿರ್ದೇಶಕ ಶಶಿಧರ ಕುರೇರ ತಿಳಿಸಿದರು.</p>.<p>‘ಸ್ಮಾರ್ಟ್ ಸಿಟಿ ಯೋಜನೆಯ ಕಚೇರಿಯಿಂದ ಮನವಿ ಬಂದಿತ್ತು. ಹೀಗಾಗಿ, ಮರಗಳನ್ನು ಕಡಿದು ತೆರವುಗೊಳಿಸಲಾಗುತ್ತಿದೆ. ಎಷ್ಟು ಮರಗಳನ್ನು ಕತ್ತರಿಸಲಾಗುವುದು ಎಂಬ ಮಾಹಿತಿ ಸದ್ಯಕ್ಕೆ ಇಲ್ಲ’ ಎಂದು ಆರ್ಎಫ್ಒ ರುದ್ರಪ್ಪ ಪ್ರತಿಕ್ರಿಯಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>