ಸಭೆ ಬಳಿಕ ಮಾತನಾಡಿದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಜೆಡಿಎಸ್ ಕಾಂಗ್ರೆಸ್ ಒಟ್ಟಾಗಿ ಸ್ಪರ್ಧೆಗಿಳಿದರೆ 20ಕ್ಕೂ ಹೆಚ್ಚು ಸ್ಥಾನ ಗೆಲ್ಲಬಹುದು.ಸೀಟು ಹಂಚಿಕೆ ಬಗ್ಗೆ ಹಿಂದೆಯೂ ಒಂದು ಸಭೆ ಆಗಿದೆ. ನಾವು ಮುಖ್ಯವಾಗಿ ಈ ಚುನಾವಣೆಯಲ್ಲಿ ಗೆಲ್ಲಬೇಕು. ವೇಣುಗೋಪಾಲ್, ಕುಮಾರಸ್ವಾಮಿ, ಡ್ಯಾನಿಶ್ ಅಲಿ ಎಲ್ಲ ವಿಷಯ ಚರ್ಚೆ ಮಾಡಿದ್ದೇವೆ. ಸರಿಯಾದ ದಿಕ್ಕಿನಲ್ಲಿಯೇ ಚರ್ಚೆ ಸಾಗಿದೆ ಎಂದರು.