‘ಕೊಲಿಜಿಯಂ ಶಿಫಾರಸು ಮಾಡಿರುವ ಐದು ಜನರ ಹೆಸರುಗಳಿಗೆ ಪ್ರಧಾನ ಮಂತ್ರಿ ಬುಧವಾರ (ಫೆ.7) ಒಪ್ಪಿಗೆ ನೀಡಿ ರಾಷ್ಟ್ರಪತಿ ಅಂಕಿತಕ್ಕೆ ರವಾನಿಸಿದ್ದಾರೆ. ಹೀಗಾಗಿ ಸತ್ಯಾಗ್ರಹ ಹಿಂದೆಗೆದುಕೊಳ್ಳಲಾಗುತ್ತಿದೆ’ ಎಂದು ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ್ ಮತ್ತು ಪ್ರಧಾನ ಕಾರ್ಯದರ್ಶಿ ಎ.ಎನ್.ಗಂಗಾಧರಯ್ಯ ತಿಳಿಸಿದ್ದಾರೆ.