ನವೆಂಬರ್ನಲ್ಲಿ ಅತ್ಯಾಚಾರ ನಡೆದಿದೆ ಎಂದು ಬಾಲಕಿಯ ಸಹೋದರ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ದೂರು ಸಲ್ಲಿಸಿದ್ದರು. ಆದರೆ, ಅಧಿಕಾರಿಗಳು ತನಿಖೆ ನಡೆಸದೆ ನಿರ್ಲಕ್ಷ್ಯ ವಹಿಸಿದ್ದರು. ಈ ಸಂಬಂಧ ಆಶ್ರಯ ಕೇಂದ್ರದ ಮೇಲ್ವಿಚಾರಕ ಸಯ್ಯದ್ ಪಾಷಾ ಅವರನ್ನು ಜಿಲ್ಲಾಧಿಕಾರಿ ಆರ್.ವೆಂಕಟೇಶ ಕುಮಾರ್ ಅಮಾನತುಗೊಳಿಸಿದ್ದಾರೆ. ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗುರುಪ್ರಸಾದ್ ವಿರುದ್ಧ ಶಿಸ್ತುಕ್ರಮಕ್ಕೆ ಶಿಫಾರಸು ಮಾಡಿದ್ದಾರೆ.