<p><strong>ಬೆಂಗಳೂರು:</strong> ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ವಿರೋಧಿಸಿ ನಗರದಲ್ಲಿ ಗುರುವಾರ ನಡೆದ ಪ್ರತಿಭಟನೆ ವೇಳೆ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ ಅಮೂಲ್ಯ ಲಿಯೋನಾಗೆ 5ನೇ ಎಸಿಎಂಎಂ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.</p>.<p>ಈ ಮಧ್ಯೆ, ಅಮೂಲ್ಯ ವಿರುದ್ಧ ರಾಜ್ಯದ ಹಲವೆಡೆ ಆಕ್ರೋಶದ ಕಿಡಿ ಹೊತ್ತಿದೆ. ವಿವಿಧ ಸಂಘಟನೆಗಳ ಕಾರ್ಯಕರ್ತರು ಹಲವೆಡೆ ಪ್ರತಿಭಟನೆ ನಡೆಸಿದ್ದಾರೆ. ಅಮೂಲ್ಯ ಭಾವಚಿತ್ರಗಳಿಗೆ ಬೆಂಕಿ ಹಚ್ಚಿ ರೋಷ ವ್ಯಕ್ತಪಡಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/karnataka-cm-bs-yediyurappa-says-woman-arrested-for-shouting-pakistan-zindabad-has-naxal-links-706930.html" target="_blank">ಅಮೂಲ್ಯಗೆ ನಕ್ಸಲರ ಜತೆ ಸಂಬಂಧವಿತ್ತು: ಸಿಎಂ ಬಿ.ಎಸ್. ಯಡಿಯೂರಪ್ಪ</a></p>.<p><strong>ಪರಪ್ಪನ ಅಗ್ರಹಾರಜೈಲಿಗೆಅಮೂಲ್ಯ: </strong>ಅಮೂಲ್ಯ ಅವರನ್ನು ಪರಪ್ಪನ ಅಗ್ರಹಾರದ ಜೈಲಿಗೆ ಕಳುಹಿಸಲಾಗಿದೆ. ಜೈಲಿಗೆ ಕರೆದೊಯ್ಯುವ ವೇಳೆ, ಅಮೂಲ್ಯ ವಿಜಯದ ಸಂಕೇತ ತೋರಿಸಿದ್ದಾರೆ.</p>.<p>ಅಮೂಲ್ಯ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿದೆ. ಆಕೆ ನೀಡಿದ ಹೇಳಿಕೆ ಆಧಾರದ ಮೇಲೆ ಬಂಧಿಸಿರುವ ಉಪ್ಪಾರಪೇಟೆ ಠಾಣೆ ಪೊಲೀಸರು, ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.</p>.<p>ಅಮೂಲ್ಯ ಅವರನ್ನು ಬಂಧಿಸಿದ ಬಳಿಕ ಕೋರಮಂಗಲದ ರಾಷ್ಟ್ರೀಯ ಕ್ರೀಡಾ ಗ್ರಾಮದಲ್ಲಿರುವ 5ನೇ ಎಸಿಎಂಎಂ ನ್ಯಾಯಾಧೀಶರಾದ ಶಿರಿನ್ ಜೆ. ಅನ್ಸಾರಿ ನಿವಾಸಕ್ಕೆ ಕರೆದೊಯ್ದು ಹಾಜರು ಪಡಿಸಿದ್ದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/district/ramanagara/hd-kumaraswamy-says-pro-pakistan-slogan-raising-is-anti-national-and-government-should-take-action-706928.html" target="_blank">ಪಾಕಿಸ್ತಾನ ಪರ ಘೋಷಣೆ ದೇಶದ್ರೋಹದ ಕೆಲಸ: ಎಚ್.ಡಿ. ಕುಮಾರಸ್ವಾಮಿ</a></p>.<p>ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದ ಪಶ್ಚಿಮ ವಿಭಾಗ ಡಿಸಿಪಿ ರಮೇಶ್ ಬಾನೋತ್, ಅಮೂಲ್ಯ ವಿಚಾರಣೆ ನಡೆಸಿದಾಗ ಉದ್ದೇಶಪೂರ್ವಕವಾಗಿಯೇ ಈ ಕೃತ್ಯ ಮಾಡಿದ್ದಾರೆ ಎಂದೆನಿಸುತ್ತಿದೆ’ ಎಂದರು.</p>.<p><strong>ಆಯೋಜಕರ ವಿಚಾರಣೆ: </strong>ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಕಾರ್ಯಕ್ರಮ ಹಮ್ಮಿಕೊಂಡು ಅಮೂಲ್ಯಗೆ ಮಾತಿಗೆ ಅವಕಾಶ ಕಲ್ಪಿಸಿದ ಪಾದರಾಯನಪುರ ಕಾರ್ಪೊರೇಟರ್ ಇಮ್ರಾನ್ ಪಾಷಾ ಸೇರಿದಂತೆ ಹಲವರನ್ನು ವಿಚಾರಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.</p>.<p>ಈ ಮಧ್ಯೆ, ‘ಅಮೂಲ್ಯಗೆ ನಾವ್ಯಾರು ಆಹ್ವಾನ ಕೊಟ್ಟಿಲ್ಲ. ಡಿಸಿಪಿ ಬಳಿ ನಾನೇ ಸ್ವತಃ ದೂರು ನೀಡಿದ್ದೇನೆ’ ಎಂದು ಇಮ್ರಾನ್ ಹೇಳಿದ್ದಾರೆ. ಅಲ್ಲದೆ, ನಮ್ಮ ಪ್ರತಿಭಟನೆ ಹತ್ತಿಕ್ಕಲು, ಶಾಂತಿಭಂಗ ಮಾಡಲು ಯಾರೋ ಸಂಚು ನಡೆಸಿದ್ದಾರೆ ಎಂದೂ ಅವರು ಆರೋಪಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/young-woman-shouting-slogans-pakistan-zindabad-in-bangalore-arrested-706777.html" target="_blank">ಬೆಂಗಳೂರಿನಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ ಯುವತಿ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ವಿರೋಧಿಸಿ ನಗರದಲ್ಲಿ ಗುರುವಾರ ನಡೆದ ಪ್ರತಿಭಟನೆ ವೇಳೆ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ ಅಮೂಲ್ಯ ಲಿಯೋನಾಗೆ 5ನೇ ಎಸಿಎಂಎಂ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.</p>.<p>ಈ ಮಧ್ಯೆ, ಅಮೂಲ್ಯ ವಿರುದ್ಧ ರಾಜ್ಯದ ಹಲವೆಡೆ ಆಕ್ರೋಶದ ಕಿಡಿ ಹೊತ್ತಿದೆ. ವಿವಿಧ ಸಂಘಟನೆಗಳ ಕಾರ್ಯಕರ್ತರು ಹಲವೆಡೆ ಪ್ರತಿಭಟನೆ ನಡೆಸಿದ್ದಾರೆ. ಅಮೂಲ್ಯ ಭಾವಚಿತ್ರಗಳಿಗೆ ಬೆಂಕಿ ಹಚ್ಚಿ ರೋಷ ವ್ಯಕ್ತಪಡಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/karnataka-cm-bs-yediyurappa-says-woman-arrested-for-shouting-pakistan-zindabad-has-naxal-links-706930.html" target="_blank">ಅಮೂಲ್ಯಗೆ ನಕ್ಸಲರ ಜತೆ ಸಂಬಂಧವಿತ್ತು: ಸಿಎಂ ಬಿ.ಎಸ್. ಯಡಿಯೂರಪ್ಪ</a></p>.<p><strong>ಪರಪ್ಪನ ಅಗ್ರಹಾರಜೈಲಿಗೆಅಮೂಲ್ಯ: </strong>ಅಮೂಲ್ಯ ಅವರನ್ನು ಪರಪ್ಪನ ಅಗ್ರಹಾರದ ಜೈಲಿಗೆ ಕಳುಹಿಸಲಾಗಿದೆ. ಜೈಲಿಗೆ ಕರೆದೊಯ್ಯುವ ವೇಳೆ, ಅಮೂಲ್ಯ ವಿಜಯದ ಸಂಕೇತ ತೋರಿಸಿದ್ದಾರೆ.</p>.<p>ಅಮೂಲ್ಯ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿದೆ. ಆಕೆ ನೀಡಿದ ಹೇಳಿಕೆ ಆಧಾರದ ಮೇಲೆ ಬಂಧಿಸಿರುವ ಉಪ್ಪಾರಪೇಟೆ ಠಾಣೆ ಪೊಲೀಸರು, ಸ್ವಯಂಪ್ರೇರಿತ ಪ್ರಕರಣ ದಾಖಲಿಸಿ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.</p>.<p>ಅಮೂಲ್ಯ ಅವರನ್ನು ಬಂಧಿಸಿದ ಬಳಿಕ ಕೋರಮಂಗಲದ ರಾಷ್ಟ್ರೀಯ ಕ್ರೀಡಾ ಗ್ರಾಮದಲ್ಲಿರುವ 5ನೇ ಎಸಿಎಂಎಂ ನ್ಯಾಯಾಧೀಶರಾದ ಶಿರಿನ್ ಜೆ. ಅನ್ಸಾರಿ ನಿವಾಸಕ್ಕೆ ಕರೆದೊಯ್ದು ಹಾಜರು ಪಡಿಸಿದ್ದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/district/ramanagara/hd-kumaraswamy-says-pro-pakistan-slogan-raising-is-anti-national-and-government-should-take-action-706928.html" target="_blank">ಪಾಕಿಸ್ತಾನ ಪರ ಘೋಷಣೆ ದೇಶದ್ರೋಹದ ಕೆಲಸ: ಎಚ್.ಡಿ. ಕುಮಾರಸ್ವಾಮಿ</a></p>.<p>ಪ್ರಕರಣದ ಕುರಿತು ಪ್ರತಿಕ್ರಿಯೆ ನೀಡಿದ ಪಶ್ಚಿಮ ವಿಭಾಗ ಡಿಸಿಪಿ ರಮೇಶ್ ಬಾನೋತ್, ಅಮೂಲ್ಯ ವಿಚಾರಣೆ ನಡೆಸಿದಾಗ ಉದ್ದೇಶಪೂರ್ವಕವಾಗಿಯೇ ಈ ಕೃತ್ಯ ಮಾಡಿದ್ದಾರೆ ಎಂದೆನಿಸುತ್ತಿದೆ’ ಎಂದರು.</p>.<p><strong>ಆಯೋಜಕರ ವಿಚಾರಣೆ: </strong>ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಕಾರ್ಯಕ್ರಮ ಹಮ್ಮಿಕೊಂಡು ಅಮೂಲ್ಯಗೆ ಮಾತಿಗೆ ಅವಕಾಶ ಕಲ್ಪಿಸಿದ ಪಾದರಾಯನಪುರ ಕಾರ್ಪೊರೇಟರ್ ಇಮ್ರಾನ್ ಪಾಷಾ ಸೇರಿದಂತೆ ಹಲವರನ್ನು ವಿಚಾರಣೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.</p>.<p>ಈ ಮಧ್ಯೆ, ‘ಅಮೂಲ್ಯಗೆ ನಾವ್ಯಾರು ಆಹ್ವಾನ ಕೊಟ್ಟಿಲ್ಲ. ಡಿಸಿಪಿ ಬಳಿ ನಾನೇ ಸ್ವತಃ ದೂರು ನೀಡಿದ್ದೇನೆ’ ಎಂದು ಇಮ್ರಾನ್ ಹೇಳಿದ್ದಾರೆ. ಅಲ್ಲದೆ, ನಮ್ಮ ಪ್ರತಿಭಟನೆ ಹತ್ತಿಕ್ಕಲು, ಶಾಂತಿಭಂಗ ಮಾಡಲು ಯಾರೋ ಸಂಚು ನಡೆಸಿದ್ದಾರೆ ಎಂದೂ ಅವರು ಆರೋಪಿಸಿದ್ದಾರೆ.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/young-woman-shouting-slogans-pakistan-zindabad-in-bangalore-arrested-706777.html" target="_blank">ಬೆಂಗಳೂರಿನಲ್ಲಿ ‘ಪಾಕಿಸ್ತಾನ ಜಿಂದಾಬಾದ್’ ಘೋಷಣೆ ಕೂಗಿದ ಯುವತಿ</a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>