ಇದಕ್ಕೂ ಮುನ್ನ ಹೈಕೋರ್ಟ್ನ ಹಿರಿಯ ನ್ಯಾಯಮೂರ್ತಿ ಎಲ್. ನಾರಾಯಣಸ್ವಾಮಿ ಮಾತನಾಡಿ, ‘ದಿನೇಶ್ ಮಾಹೇಶ್ವರಿ ಅವರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ ಜಾಹೀರಾತು ಫಲಕ, ಫ್ಲೆಕ್ಸ್ಗಳ ಹಾವಳಿ, ರಸ್ತೆಗುಂಡಿ ಹಾಗೂ ತ್ಯಾಜ್ಯ ವಿಲೇವಾರಿ ಸಮಸ್ಯೆಗಳ ಬಗ್ಗೆ ಗಂಭೀರವಾದ ಗಮನ ಹರಿಸುವ ಮೂಲಕ ಬೆಂಗಳೂರಿನ ಗತ ವೈಭವ ಮರಳುವಂತೆ ಮಾಡಿದ್ದಾರೆ. ಇಲ್ಲಿನ ಜನರು ಅವರನ್ನು ಸದಾ ಸ್ಮರಿಸಿಕೊಳ್ಳುತ್ತಾರೆ’ ಎಂದರು.