ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಗ್ಯ ಕಾರ್ಡ್‌ಗೆ ನಿಂತಿದ್ದ ಹಿರಿಯ ವ್ಯಕ್ತಿ ಸಾವು

ಕಾರವಾರದ ಜಿಲ್ಲಾ ಆಸ್ಪತ್ರೆಯಲ್ಲಿ ಬೆಳಿಗ್ಗೆ 7ರಿಂದ ಸಾಲಿನಲ್ಲಿ ನಿಂತಿದ್ದರು
Last Updated 20 ಮಾರ್ಚ್ 2019, 10:41 IST
ಅಕ್ಷರ ಗಾತ್ರ

ಕಾರವಾರ:ಇಲ್ಲಿನ ಜಿಲ್ಲಾ ಆಸ್ಪತ್ರೆಯಲ್ಲಿ ‘ಆಯುಷ್ಮಾನ್ ಭಾರತ ಆರೋಗ್ಯ ಕರ್ನಾಟಕ’ ಆರೋಗ್ಯ ಕಾರ್ಡ್‌ಗಾಗಿ ಸಾಲಿನಲ್ಲಿ ನಿಂತಿದ್ದಹಿರಿಯ ವ್ಯಕ್ತಿಯೊಬ್ಬರುಬುಧವಾರ ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಕಾರವಾರ ತಾಲ್ಲೂಕಿನ ಮುದಗಾ ನಿವಾಸಿ ತುಕಾರಾಮ ತಾಂಡೇಲ್ (64) ಮೃತರು. ಜಿಲ್ಲಾ ಆಸ್ಪತ್ರೆಯಲ್ಲಿ ಬೆಳಿಗ್ಗೆ 10ರಿಂದ ಆರೋಗ್ಯ ಕಾರ್ಡ್‌ಗೆ ನೋಂದಣಿ ಮತ್ತುವಿತರಣೆ ಮಾಡಲಾಗುತ್ತಿದೆ. ಬೆಳಿಗ್ಗೆ7 ಗಂಟೆಯಿಂದಲೇ ಸಾಲಿನಲ್ಲಿ ಕಾಯುತ್ತಿದ್ದ ತುಕಾರಾಮ, ಅಸ್ವಸ್ಥಗೊಂಡು ಕುಸಿದು ಬಿದ್ದರು. ತಕ್ಷಣ ಅವರನ್ನು ತುರ್ತು ಚಿಕಿತ್ಸಾ ಘಟಕಕ್ಕೆಕರೆದುಕೊಂಡು ಹೋಗಿಚಿಕಿತ್ಸೆ ನೀಡಲಾಯಿತು. ಆದರೆ, ಚಿಕಿತ್ಸೆಗೆ ಸ್ಪಂದಿಸಲಿಲ್ಲ.

ಕಾರ್ಡ್ ಪಡೆದುಕೊಳ್ಳಲು ಸ್ಥಳದಲ್ಲಿ ಸೂಕ್ತ ವ್ಯವಸ್ಥೆ ಮಾಡಿಲ್ಲ ಎಂದು ಸೇರಿದ್ದ ಜನರು ಆಕ್ರೋಶ ವ್ಯಕ್ತಪಡಿಸಿದರು.ಆಸ್ಪತ್ರೆಯ ಆವರಣದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರನ್ನು ನಿಯೋಜಿಸಲಾಗಿದ್ದು, ನೂಕುನುಗ್ಗಲು ನಿಯಂತ್ರಿಸುತ್ತಿದ್ದಾರೆ.

ಆಯುಷ್ಮಾನ್ ಕಾರ್ಡ್‌ಗಾಗಿ ಆಸ್ಪತ್ರೆ ಬಳಿ ಕಳೆದ ಕೆಲವು ದಿನಗಳಿಂದ ಪ್ರತಿನಿತ್ಯ ಬೆಳಿಗ್ಗೆಯಿಂದಲೇ ಜನರು ಸಾಲಿನಲ್ಲಿ ನಿಲ್ಲುತ್ತಿದ್ದಾರೆ.ಬುಧವಾರವೂ500ಕ್ಕೂ ಹೆಚ್ಚು ಜನರು ನಿಂತಿದ್ದರು.ಆಸ್ಪತ್ರೆಯಲ್ಲಿ ನಾಲ್ಕು ಕೌಂಟರ್‌ಗಳನ್ನು ತೆರೆಯಲಾಗಿದ್ದು, ಅರ್ಜಿ ಹಾಗೂ ದಾಖಲೆಗಳನ್ನು ಪರಿಶೀಲಿಸಿ, ಕಾರ್ಡ್ ಮುದ್ರಿಸಿ ವಿತರಣೆ ಮಾಡಲಾಗುತ್ತಿದೆ. ಹಿರಿಯ ನಾಗರಿಕರಿಗಾಗಿ ಒಂದು ಕೌಂಟರ್ ಅನ್ನು ಮೀಸಲಿಡಲಾಗಿದೆ. ಜಿಲ್ಲಾ ಆಸ್ಪತ್ರೆಯೂ ಸೇರಿದಂತೆ ಜಿಲ್ಲೆಯ ಬೇರೆ ಬೇರೆ ಕೇಂದ್ರಗಳಲ್ಲಿ ಕಾರ್ಡ್ ವಿತರಣೆ ಮಾಡಲಾಗುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT