ಅವರು ಹೇಳಿದ್ದು: 2018ರ ಮಾರ್ಚ್ 7ರಂದು ಮಧ್ಯಾಹ್ನ 1.45ರ ಸಮಯದಲ್ಲಿ ತೇಜರಾಜ ಶರ್ಮ, ನನ್ನನ್ನು ಭೇಟಿಯಾಗಲು ಕೋರಿ ಜಮೇದಾರ್ ಮೂಲಕ ಚೀಟಿ ಕಳುಹಿಸಿದ್ದ. ಒಳಗೆ ಬರಹೇಳಿದೆ. ಬಂದು ನನ್ನೆದುರು ಕುಳಿತ ಅವನು, ತುಮಕೂರು-ಕೋಲಾರ ಜಿಲ್ಲೆಗಳಲ್ಲಿನ ಟೆಂಡರ್ ಹಂಚಿಕೆಯಲ್ಲಿ ಅಧಿಕಾರಿಗಳು ಶಾಮೀಲಾಗಿ ಭ್ರಷ್ಟಾಚಾರ ಎಸಗುತ್ತಿದ್ದಾರೆ ಎಂದು ಐದು ಪುಟಗಳ ದಾಖಲೆ ನೀಡಿದ. ಅವುಗಳನ್ನು ಪರಿಶೀಲಿಸಿದ ನಾನು, ನಮ್ಮ ಅಸಿಸ್ಟೆಂಟ್ ರಿಜಿಸ್ಟ್ರಾರ್ ಲಲಿತಾ ಅವರನ್ನು ಭೇಟಿಯಾಗಿ ಎಲ್ಲವನ್ನೂ ತಿಳಿಸು ಎಂದೆ.