ಬೆಂಗಳೂರು: ವಿಧಾನಮಂಡಲದ ಅಧಿವೇಶನವನ್ನು ಅನಿರ್ದಿಷ್ಟ ಅವಧಿಗೆ ಮುಂದೂಡಲಾಯಿತು.
ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕು ವ್ಯಾಪಕವಾಗಿ ಹಬ್ಬುತ್ತಿದ್ದು, ಕೋವಿಡ್- 19 ಪ್ರಕರಣಗಳು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅಧಿವೇಶನ ಮೊಟಕುಗೊಳಿಸಲು ಸೋಮವಾರ ಕಲಾಪ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ ತೆಗೆದುಕೊಳ್ಳಲಾಗಿತ್ತು.
ಆ ಪ್ರಕಾರ, ಮಂಗಳವಾರ ಬೆಳಿಗ್ಗೆ ಬಜೆಟ್ ಮೇಲಿನ ಚರ್ಚೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಉತ್ತರ ನೀಡಿದರು. ಕೆಲವು ಪ್ರಮುಖ ಮಸೂದೆಗಳಿಗೂ ಅಂಗೀಕಾರ ನೀಡಲಾಯಿತು.